ಕಲ್ಯಾಣಸಿರಿ ವಿಶೇಷ

ಭಾವೈಕ್ಯತಾ ದಿನ ಆಚರಣೆ ಮಾಡಿದರೇ ತಪ್ಪೇನು?

What is wrong with celebrating Bhavaikya Day?

ಗದಗ: ‘ಮಸೀದಿ, ಮಂದಿರಗಳಿಗೆ ತೋಂಟದಾರ್ಯ ಮಠ ಜಾಗ ಕೊಟ್ಟಿದೆ. ಭಾವೈಕ್ಯತಾ ದಿನ ಆಚರಣೆ ಮಾಡಿದರೇ ತಪ್ಪೇನು’ ಎಂದು ತೋಂಟದಾರ್ಯ ಸಿದ್ದರಾಮ ಶ್ರೀಗಳು ಪ್ರಶ್ನಿಸಿದ್ದಾರೆ.

ಭಾವೈಕ್ಯತಾ ದಿನ ಆಚರಣೆ ವಿರೋಧಿಸಿ ದಿಂಗಾಲೇಶ್ವರ ಶ್ರೀಗಳು ಪತ್ರಿಕಾಗೋಷ್ಠಿ ನಡೆಸಿದ ಕಾರಣ ತೋಂಟದಾರ್ಯ ಮಠದಲ್ಲೂ ದಿಂಗಾಲೇಶ್ವರ ಶ್ರೀ ಹೇಳಿಕೆ ವಿರೋಧಿಸಿ ಸಿದ್ಧರಾಮ ಶ್ರೀಗಳು ಮಾತನಾಡಿದರು.

2004 ರಲ್ಲಿ ಶ್ರೀ ಗಳಿಗೆ ರಾಷ್ಟ್ರೀಯ ಕೋಮ ಸೌಹಾರ್ದ ಪ್ರಶಸ್ತಿ ಲಭಿಸಿದೆ ಆ ಪ್ರಶಸ್ತಿಯನ್ನು ನಮ್ಮ ದೇಶದ ಹೆಮ್ಮೆಯ ರಾಷ್ಟ್ರಪತಿ ಅಬ್ದುಲ್ ಕಲಾಂ ಮತ್ತು ಅಂದಿನ ಪ್ರಧಾನಿ ವಾಜಪೇಯಿ ಅವರು ಇವರ ಭಾವ್ಯಕತೆ ವಿಷಯ ಮತ್ತು ವಾಸ್ತು ಸ್ಥಿತಿ ಪರಿಗಣಿಸಿ ದೂರದ ದೆಹಲಿಯಲ್ಲಿ ಇವರ ಸಾಧನೆ ಪರಿಗಣಿಸಿ ಮತ್ತು ಒಂದು ಪ್ರಶಸ್ತಿ ಪ್ರದಾನ ಮಾಡಲು ಇರುವ ಎಲ್ಲ ಮಾನ ದಂಡಗಳನ್ನು ಪರಿಗಣಿಸಿ ಅಂದಿನ ಕೇಂದ್ರ ಸರ್ಕಾರ ಅನುಮೋದನೆ ನೀಡಿ ಶ್ರೀಗಳಿಗೆ ಕೋಮ ಸೌಹಾರ್ದ ಪ್ರಶಸ್ತಿ ನೀಡಿರುತ್ತದೆ ಅದಕ್ಕೆ ಅವರು ಭಾವ್ಯಕತೆ ಹರಿಕಾರರು ಎಂದು ಇವತ್ತು ಹೇಳಿಲ್ಲ 2004 ರಲ್ಲಿ ಕೇಂದ್ರ ಸರ್ಕಾರ ಹೇಳಿದೆ ಈಗ ಯಾರೋ ಏನೋ ಅಂತೆ ಕಂತೆ ಪುರಾಣ ಹೇಳಿದ್ರೆ ಅದನ್ನು ಕೇಳುವರು ಯಾರು ಗದುಗಿನ ಲಿಂ ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಭಾವ್ಯಕತೆ ಹರಿಕಾರರು. ಈ ಪದ ಯಾರಿಗೊಬ್ಬರಿಗೆ ಸೀಮಿತವಲ್ಲ

ತೋಂಟದಾರ್ಯ ಮಠದಲ್ಲಿ ಸಾಕಷ್ಟು ಸಾಮರಸ್ಯದ ಕೆಲಸ ಮಾಡಿದ್ದೇವೆ. ಜಾತ್ರಾ ಕಮಿಟಿಗೆ ಮುಸ್ಲಿಮರನ್ನು ಆಯ್ಕೆ ಮಾಡಿದ ಉದಾಹರಣೆ ಇದೆ. ಮಠದಲ್ಲಿ ಅನೇಕ ಮುಸ್ಲಿಂ ಭಕ್ತರಿದ್ದಾರೆ. ಲಿಂ. ಸಿದ್ಧಲಿಂಗ ಶ್ರೀಗಳು ಎಲ್ಲ ಸಮುದಾಯದ ಜತೆ ಭಾವೈಕ್ಯತೆಯಿಂದ ಇದ್ದರು. ಸಿದ್ಧಲಿಂಗ ಶ್ರೀಗಳ ಮೇಲೆ ಆರೋಪ ಸಲ್ಲ. ಮತ್ತೊಬ್ಬರನ್ನು ಟೀಕೆ ಮಾಡುವುದು ಸರಿಯಲ್ಲ. ನಮ್ಮ ಕಾಯಕ ನಮ್ಮ ಜತೆ ಇರಲಿ. ಸೌಹಾರ್ದತೆ, ಸಹೋದರತ್ವ ಬೇಕು. ಸಂವಿಧಾನದಲ್ಲೇ ಭಾವೈಕ್ಯತೆ ಸಂದೇಶವಿದೆ’ ಎಂದರು.

‘ಭಾವೈಕ್ಯತೆ ಎಂಬುವುದು ಒಬ್ಬ ವ್ಯಕ್ತಿಗೆ ಸೀಮಿತ ಆಗಿದ್ದಲ್ಲ. ಎಲ್ಲರೂ ಆಚರಿಸಬಹುದು. ದಿಂಗಾಲೇಶ್ವರ ಶ್ರೀಗಳು ಕರಾಳ ದಿನ ಆಚರಣೆ ಮಾಡಿದರೇ ಅದನ್ನು ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ನಮಗೆ ಸರ್ಕಾರ ರಕ್ಷಣೆ ನೀಡಬೇಕು. ಕರಾಳ ದಿನ ಆಚರಣೆ ತಪ್ಪಾದರೆ ಸರ್ಕಾರ ಕರಾಳ ದಿನ ಆಚರಣೆಯನ್ನು ನಿಷಿದ್ಧ ಮಾಡಬೇಕು ಅಥವಾ ಸರ್ಕಾರ ನಮಗೆ ನಿರ್ದೇಶನ ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

‘ವೀರೈಶವ ಲಿಂಗಾಯತ ಧರ್ಮವನ್ನು ಸಿದ್ಧಲಿಂಗ ಶ್ರೀಗಳು ಒಡೆದಿದ್ದಾರೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪಕ್ಕೆ ಪ್ರತಿಕ್ರಿಸಿದ ಅವರು, ‘ಹಿಂದೂ ಎಂಬುದು ಬದುಕುವ ಪದ್ಧತಿಯೇ ವಿನಹ ಧರ್ಮವಲ್ಲ. ಹಿಂದು ಧರ್ಮಕ್ಕೆ ಸಂಸ್ಥಾಪಕರೇ ಇಲ್ಲ. ಭಾರತದಲ್ಲಿ ಇರುವರೆಲ್ಲರೂ ಹಿಂದೂಗಳೇ ಎಂಬುದು ಅರಿತುಕೊಳ್ಳಬೇಕು. ವೀರಶೈವ ಎಂಬುದು ಲಿಂಗಾಯತದ ಒಂದು ಭಾಗ. 12ನೇ ಶತಮಾನದಲ್ಲೇ ಲಿಂಗಾಯತ ಧರ್ಮ ಇದೆ. ಅದನ್ನು ಒಡೆಯುವ ಪ್ರಮೇಯವೇ ಇಲ್ಲ. ಪ್ರತ್ಯೇಕ ಧರ್ಮ ಹೋರಾಟ ತಟಸ್ಥದ ಹಿಂದೆ ರಾಜಕಾರಣಿಗಳ ಹೊರಳಾಟವಿದೆ. ರಾಜಕಾರಣಿಗಳಿಗೆ ಮತಮುಖ್ಯ. ಸಿದ್ಧಾಂತವಲ್ಲ.ಈ ವಿಷಯ ಎಲ್ಲರಿಗೂ ಗೊತ್ತೇ ಇದೆ’ ಎಂದು ತಿಳಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago