Anganwadi boy recited the Preamble of the Constitution!
ಎಲ್ಲರ ಗಮನಸೆಳೆದ ಹೇರೂರು ಗ್ರಾಮದ ನಾಲ್ಕು ವರ್ಷದ ಭದ್ರೇಶ
ಗಂಗಾವತಿ : ತಾಲೂಕಿನ ಹೇರೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ನಾಲ್ಕು ವರ್ಷದ ಅಂಗನವಾಡಿ ಬಾಲಕನೊಬ್ಬ ಸಂವಿಧಾನ ಪೀಠಿಕೆ ಪಠಣ ಮಾಡಿ ಎಲ್ಲರ ಗಮನಸೆಳೆದು, ಶಹಬ್ಬಾಷ್ ಎನಿಸಿಕೊಂಡಿದ್ದಾನೆ. !
ಹೌದು ನೀವು ಆಶ್ಚರ್ಯಪಟ್ಟರೂ ನಂಬಲೇಬೇಕು. ಹೇರೂರು ಗ್ರಾಮದ 4ನೇ ಅಂಗನವಾಡಿ ಕೇಂದ್ರದ ಬಾಲಕ ಭದ್ರೇಶ ತಂದೆ ವೀರೇಶ ಎಂಬ ಪೋರ ಎರಡೂವರೆ ನಿಮಿಷಗಳ ಕಾಲ ಸಂವಿಧಾನ ಪೀಠಿಕೆ ಪಠಣ ಮಾಡಿ ನೆರೆದಿದ್ದವರ ಮನಸ್ಸು ಗೆದ್ದಿದ್ದಾನೆ. ನೆರೆದಿದ್ದವರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.
ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಬುಧವಾರ ಗ್ರಾಮದ ಶಾಲಾ ಮಕ್ಕಳು ಮಹನೀಯರ ವೇಷಭೂಷಣ ಧರಿಸಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಹೇರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೇಘರಾಣಿ ಬಿ.ಮರಕುಂಬಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಹೂಮಾಲೆ ಹಾಕಿ ಜಾಥಾಗೆ ಸ್ವಾಗತಿಸಿದರು. ನಂತರ ಗ್ರಾಮದಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಯಿತು.
ಗ್ರಾ.ಪಂ. ಉಪಾಧ್ಯಕ್ಷರಾದ ನಾಗಪ್ಪ, ಸಿಡಿಪಿಓ ಪ್ರವೀಣ್ ಹೇರೂರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ರವಿಶಾಸ್ತ್ರಿ, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಲಕ್ಷ್ಮೀದೇವಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಭಾನಮೇಗಂ, ಗ್ರಾಪಂ ಸದಸ್ಯರು, ಕನ್ನಡಪರ ಸಂಘಟನೆ ಮುಖಂಡರು, ದಲಿತಪರ ಸಂಘಟನೆಗಳ ಮುಖಂಡರು ಸೇರಿ ಗ್ರಾಪಂ ಸಿಬ್ಬಂದಿಗಳು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…