ಕಲ್ಯಾಣಸಿರಿ ವಿಶೇಷ

ಕಲ್ಯಾಣ ಕರ್ನಾಟಕ ಕೃಷ್ಣ ಕಾಡಾದ ಹಸನಾಪುರ‌ ವಿಭಾಗ ಹಾಗೂ ಉಪ ವಿಭಾಗ ಕಛೇರಿಗಳು ಸ್ಥಳಾಂತರಿಸಿ ಆದೇಶ ಮಾಡಿದ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ 21ರಂದು ಪ್ರತಿಭಟನೆ

Hasanapur division and sub-division offices of Kalyan Karnataka Krishna Kada protested at Freedom Park, Bangalore on 21st against the government’s order to relocate them.

ಬೆಂಗಳೂರು : ಹೈದ್ರಾಬಾದ್ ಕರ್ನಾಟಕವು ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೃಷ್ಣಾ-ಕಾಡಾದ ಹಸನಾಪುರ ವಿಭಾಗ ಮತ್ತು ಉಪ ವಿಭಾಗದ ಕಚೇರಿಗಳನ್ನು ಮುಂಬೈ ಕರ್ನಾಟಕ್ಕೆ ಸ್ಥಳಾಂತರಿಸುತ್ತಿರಿಸ ಬಾರದೆಂದು ಆಗ್ರಹಿಸಿ ಫೆ.೨೧ರಂದು ಫ್ರೀಡಂ ಪಾರ್ಕ್ನಲ್ಲಿ ಪತ್ರಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ 371(j)ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿ ತಿಳಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಸೈಬಣ್ಣ ಜಮಾದಾರ ಮಾತನಾಡಿ, ಹೈದ್ರಾಬಾದ್ ಕರ್ನಾಟಕವು ಕರ್ನಾಟಕ ರಾಜ್ಯದಲ್ಲಿ ಅತಿ ಹಿಂದುಳಿದ ಪ್ರದೇಶವಾಗಿದ್ದು, ಹುದ್ದೆ ಸಮೇತ ಕಚೇರಿಗಳನ್ನು ಸ್ಥಳಾಂತರ ಮಾಡುವುದರಿಂದ ಲಕ್ಷಾಂತರ ರೈತರು ಹಾಗೂ ೧೫೦ಕ್ಕೂ ಹೆಚ್ಚು ಹೈದ್ರಾಬಾದ್ ಕರ್ನಾಟಕದ ಸರ್ಕರಿ ನೌಕರಿಗಳು ಕಳೆದುಕೊಂಡು ತೊಂದರೆ ಅನುಭವಿಸುತ್ತಾರೆ. ಈ ಭಾಗದಲ್ಲಿ ಇರುವ ಉದ್ಯೋಗ ಬೇರೆ ಕಡೆ ಹೋಗುವದರಿಂದ ನೀರುದ್ಯೋಗ ಸಮಸ್ಯೆ ಹೆಚ್ಚಾಗುತ್ತದೆ ಆದ್ದರಿಂದ ಸ್ಥಳಾಂತರಕ್ಕೆ ಹೊರಡಿಸಿರುವ ಈ ಆದೇಶವನ್ನು ಸರ್ಕಾರ ಹಿಂಪಡೆದು ಹಸನಾಪುರ ದಲ್ಲಿ ವಿಭಾಗ ಕಚೇರಿಯನ್ನು ಹಾಗೂ ಉಪ ವಿಭಾಗ ಕಛೇರಿಗಳನ್ನು ಮೂಲ ಸ್ಥಳದಲ್ಲೆ ಮುಂದುವರೆಸುವಂತೆ ಒತ್ತಾಯಿಸಿದರು.
ಹಸನಾಪೂರ ಕಾರ್ಯಪಾಲಕ ಇಂಜಿನಿಯರ್ ಹೊಲಗಾಲುವ ವಿಭಾಗ-೨, ಮತ್ತು ಕೃಷ್ಣಾ-ಕಾಡಾ ಭೀಮನರಾಯನಗುಡಿ ಅಧೀನದಲ್ಲಿ ಬರುವ ವಿಭಾಗ ಮತ್ತು ಉಪ ವಿಭಾಗ ಕಾರ್ಯಾಲಯ ಹಾಗೂ ಉಪ ವಿಭಾಗ ಕಚೇರಿ ಬಾತಾಂಬ್ರ ಬೀದರ್ ಜಿಲ್ಲೆಯ ಹುದ್ದೆ ಸಮೇತ ಸ್ಥಳಾಂತರ ಮಾಡಲು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಇಲ್ಲವಾದಲ್ಲಿ ಕಲ್ಯಾಣ ಕರ್ನಾಟದ ಎಲ್ಲಾ ಜಿಲ್ಲಾ-ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ಶಾಸಕ-ಸಚಿವರ ಮನೆಯ ಮುಂದೆ ಉಗ್ರಹೋರಾಟ ಮಾಡಲಾಗುವುದು ಎಂದು ಸೈಬಣ್ಣ ಜಮಾದರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಚಿಂತಕ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ 371(j) ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿ ಸದಸ್ಯರಾದ ಶಿವಲಿಲಾ, ಚನ್ನವೀರ ತಂಗ,ಶಿವು ರಾಠೋಡ್,ಸಂಜು ಹೊಡಲ್ಕರ್,ಡಿ.ಎಸ್.ಹಡಲಗಿ ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago