Breaking News

ಕಾ|| ಭಾರಧ್ವಾಜ್ ಸಿ.ಪಿ.ಐ.ಎಂ.ಎಲ್ ಪಕ್ಷಕ್ಕೆಮರಳಿಸೇರ್ಪಡೆವಿಜಯ ದೊರೆರಾಜು

Ka|| Bhardwaj rejoins CPIML Vijaya Doraraj

ಜಾಹೀರಾತು
Screenshot 2024 02 21 18 59 04 35 E307a3f9df9f380ebaf106e1dc980bb6 300x162

ಗಂಗಾವತಿ: ಸಿ.ಪಿ.ಐ.ಎಂ.ಎಲ್ ಪಕ್ಷದಲ್ಲಿ ಕಾ|| ಭಾರಧ್ವಾಜರು ಸುಮಾರು ೨೩ ವರ್ಷಗಳಿಂದ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಾ, ಕಳೆದ ೦೬ ತಿಂಗಳ ಹಿಂದೆ ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರ ಸರಿದು ಪಕ್ಷದಲ್ಲಿನ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದರು. ಪೌರಕಾರ್ಮಿಕರ ಹಾಗೂ ರೈಸ್ ಮಿಲ್ ಕಾರ್ಮಿಕರ, ಹಾಗೂ ಇನ್ನಿತರ ಸಂಘಟನೆಗಳ ಕಾರ್ಮಿಕರ ಒತ್ತಾಯದ ಮೇರೆಗೆ ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷಕ್ಕೆ ಮರಳಿ ಸೇರ್ಪಡೆಗೊಂಡಿರುವುದು ಅತೀವ ಸಂತಸ ತಂದಿದೆ ಎಂದು ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿ.ಪಿ.ಐ.ಎಂ.ಎಲ್ ಪಕ್ಷಕ್ಕೆ ಭಾರಧ್ವಾಜ್‌ರವರು ಮರಳಿ ಸೇರ್ಪಗೊಳ್ಳುವ ಬಗ್ಗೆ ಕಾ|| ಕೆಂಚಪ್ಪ ಹಿರೇಖೇಡ, ಕಾ|| ಮಣಿ, ಕಾ|| ವಿಜಯ್ ಚರ್ಚಿಸಿ ಪಕ್ಷದ ರಾಜ್ಯ ಶಾಖೆಗೆ ತಿಳಿಸಿದರು. ನಂತರ ರಾಜ್ಯ ಸ್ಥಾಯಿ ಸಮಿತಿ ಸದಸ್ಯರೆಲ್ಲರೂ ಭಾರಧ್ವಾಜರಿಗೆ ಶುಭ ಕೋರಿ ಪಕ್ಷಕ್ಕೆ ಸ್ವಾಗತಿಸಿದರು.
ಇದೆ ಸಂದರ್ಭದಲ್ಲಿ ಪೌರಕಾರ್ಮಿಕರ ಸಂಘಟನೆಯ ಮುಖಂಡರಾದ ಪರಶುರಾಮ, ಬುಡ್ಡಪ್ಪ, ಹನುಮಂತಪ್ಪ, ಮಾಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.