Breaking News

ಕುಡಿಯುವ ನೀರಿನ ಸಮಸ್ಯೆ ಸಹಾಯವಾಣಿ ಕೇಂದ್ರ ಆರಂಭ

Drinking water problem helpline center started


ತಾವರಗೇರಾ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಭವಣೆ ಸಮಸ್ಯೆ ಉಂಟಾದಲ್ಲಿ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಇವರ ನಿರ್ದೇಶನದಂತೆ ಪಟ್ಟಣ ಪಂಚಾಯತಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನಬಿಸಾಬ ಹೆಚ್ ಖುದಾನವರ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುತ್ತಾರೆ. ಬೇಸಿಗೆ ಬಿಸಿಲು ಆರಂಭವಾಗಿದ್ದು ಈ ಬೇಸಿಗೆ ದಿನದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಎಂಬ ದೂರ ದೃಷ್ಟಿಯಿಂದ ಈ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿರುತ್ತದೆ.
ಪಟ್ಟಣದ ಯಾವುದೇ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾದಲ್ಲಿ ಅಥವಾ ಸಮಸ್ಯೆಗಳು ಇದ್ದಲ್ಲಿ ಸಹಾಯವಾಣಿ ಕೇಂದ್ರ ಸಂಖ್ಯೆ ೯೯೦೦೫೭೨೧೨೦, ೮೯೭೧೦೧೪೩೫೧ ಕರೆ ಮಾಡಿ ನಿಮ್ಮ ದೂರನ್ನು ದಾಖಲಿಸಿ ಅದಕ್ಕೆ ಪರಿಹಾರವನ್ನು ಪಡೆದುಕೊಳ್ಳಬಹುದು ಎಂದು ಸಾರ್ವಜನಿಕರಲ್ಲಿ ಪಪಂ ಮುಖ್ಯಾಧಿಕಾರಿ ನಬಿಸಾಬ ಹೆಚ್ ಖುದಾನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.