Breaking News

“ವಿಶ್ವಕರ್ಮರ ಸಾಧನೆ ಸರ್ವವ್ಯಾಪಿಯಾಗಿದೆ” ವಿಶ್ವಕರ್ಮನಾಡೋಜಡಾ.ಉಮೇಶ್ ಕುಮಾರ್

Vishwakarma’s achievement is all-pervading” Vishwakarmanadojada.Umesh Kumar

ಜಾಹೀರಾತು
Screenshot 2024 02 22 19 43 48 45 6012fa4d4ddec268fc5c7112cbb265e7 300x158

ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರದ ಕಜ್ಕೆ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಅನ್ನಪೂರ್ಣೇಶ್ವರಿ,
ಶ್ರೀ ಶಂಕರಾಚಾರ್ಯ ಹಾಗೂ ಶ್ರೀ ವಿನಾಯಕ ದೇವಾಲಯದ ಶಿಲಾಬಿಂಬ ಪ್ರತಿಷ್ಠೆ ಹಾಗೂ ಮಹಾ ಕುಂಬಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ, ಶ್ರೀ ಶಿವಾನಂದ ಭಾರತಿ ಸ್ವಾಮೀಜಿ, ಶ್ರೀ ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ,
ಶ್ರೀ ಈಶ ವಿಠಲ ದಾಸ್ ಸ್ವಾಮೀಜಿ, ರಾಜ್ಯ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ
ಡಾ. ಉಮೇಶ್ ಕುಮಾರ್, ದೇವಾಲಯ ಸಮಿತಿ ಪ್ರಮುಖರು ಹಾಗೂ ಅನೇಕ ವಿಶ್ವಕರ್ಮ ಕುಲಬಾಂಧವರು
ಈ ಸಮಾರಂಭದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಉಮೇಶ್ ಕುಮಾರ್ “ವಿಶ್ವಕರ್ಮ ಸಮಾಜದ ಸಾಧನೆಯು ಸರ್ವವ್ಯಾಪಿಯಾಗಿದ್ದು, ಅದಕ್ಕೆ ಯಾವುದೇ ಮಿತಿಯಿಲ್ಲ. ಈ ದೇವಸ್ಥಾನವನ್ನು ವಿಶ್ವಕರ್ಮ ಸಮಾಜದ ಹೆಮ್ಮೆ ಎಂದು ಕರೆಯಬಹುದು. ಈ ದೇವಸ್ಥಾನ ಅಜರಾಮರವಾಗಿ ಬೆಳೆಯಲಿ” ಎಂದು ಹಾರೈಸಿದರು.

ದೇವಾಲಯದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಶಿಲಾಮೂರ್ತಿಯನ್ನು ಅಯೋಧ್ಯೆಯ ಬಾಲರಾಮನ ಮೂರ್ತಿಯ ಶಿಲ್ಪಿ, ವಿಶ್ವಕರ್ಮ ಸಮಾಜದ ಹೆಮ್ಮೆಯ ಶ್ರೀ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿದ್ದು, ಅತ್ಯಂತ ಅದ್ಬುತವಾಗಿ ಮೂಡಿಬಂದಿದೆ.

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.