Vishwakarma’s achievement is all-pervading” Vishwakarmanadojada.Umesh Kumar
ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರದ ಕಜ್ಕೆ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಅನ್ನಪೂರ್ಣೇಶ್ವರಿ,
ಶ್ರೀ ಶಂಕರಾಚಾರ್ಯ ಹಾಗೂ ಶ್ರೀ ವಿನಾಯಕ ದೇವಾಲಯದ ಶಿಲಾಬಿಂಬ ಪ್ರತಿಷ್ಠೆ ಹಾಗೂ ಮಹಾ ಕುಂಬಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ, ಶ್ರೀ ಶಿವಾನಂದ ಭಾರತಿ ಸ್ವಾಮೀಜಿ, ಶ್ರೀ ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ,
ಶ್ರೀ ಈಶ ವಿಠಲ ದಾಸ್ ಸ್ವಾಮೀಜಿ, ರಾಜ್ಯ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ
ಡಾ. ಉಮೇಶ್ ಕುಮಾರ್, ದೇವಾಲಯ ಸಮಿತಿ ಪ್ರಮುಖರು ಹಾಗೂ ಅನೇಕ ವಿಶ್ವಕರ್ಮ ಕುಲಬಾಂಧವರು
ಈ ಸಮಾರಂಭದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಉಮೇಶ್ ಕುಮಾರ್ “ವಿಶ್ವಕರ್ಮ ಸಮಾಜದ ಸಾಧನೆಯು ಸರ್ವವ್ಯಾಪಿಯಾಗಿದ್ದು, ಅದಕ್ಕೆ ಯಾವುದೇ ಮಿತಿಯಿಲ್ಲ. ಈ ದೇವಸ್ಥಾನವನ್ನು ವಿಶ್ವಕರ್ಮ ಸಮಾಜದ ಹೆಮ್ಮೆ ಎಂದು ಕರೆಯಬಹುದು. ಈ ದೇವಸ್ಥಾನ ಅಜರಾಮರವಾಗಿ ಬೆಳೆಯಲಿ” ಎಂದು ಹಾರೈಸಿದರು.
ದೇವಾಲಯದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಶಿಲಾಮೂರ್ತಿಯನ್ನು ಅಯೋಧ್ಯೆಯ ಬಾಲರಾಮನ ಮೂರ್ತಿಯ ಶಿಲ್ಪಿ, ವಿಶ್ವಕರ್ಮ ಸಮಾಜದ ಹೆಮ್ಮೆಯ ಶ್ರೀ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿದ್ದು, ಅತ್ಯಂತ ಅದ್ಬುತವಾಗಿ ಮೂಡಿಬಂದಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…