Breaking News

ಗಂಗಾವತಿಯಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥಾಹನುಮಂತ ಮೂಳೆ

Constitution Awareness Jatha successfully held in Gangavati Hanuman bone

ಜಾಹೀರಾತು

ಗಂಗಾವತಿ: ನಗರದಲ್ಲಿ ಫೆಬ್ರವರಿ-೨೩ ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಹನುಮಂತ ಮೂಳೆ ಪ್ರಕಟಣೆಯಲ್ಲಿ ತಿಳಿಸಿದರು.
ಸಂವಿಧಾನ ಸಮರ್ಪಣೆ ನಿಮಿತ್ತ ರಾಜ್ಯ ಸರ್ಕಾರ ಆಯೋಜಿಸಿರುವ ಸಂವಿಧಾನ ಜಾಗೃತಿ ರಥಕ್ಕೆ ನಗರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಜಾಗೃತಿ ರಥಕ್ಕೂ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಸಿ, ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಜಾಥಾ ಕಾರ್ಯಕ್ರಮವು ನಗರದ ಸಿ.ಬಿ.ಎಸ್ ವೃತ್ತದಿಂದ ನ್ಯಾಯಾಲಯದ ಮುಂಭಾಗದಲ್ಲಿರುವ ಅಂಬೇಡ್ಕರ್ ವೃತ್ತದವರೆಗೆ ನಡೆಯಿತು. ಮಾರ್ಗದುದ್ದಕ್ಕೂ ಶಾಲಾ-ಕಾಲೇಜು ಮತ್ತು ಸಂಘ-ಸAಸ್ಥೆಗಳ ಮಕ್ಕಳು, ಕಾರ್ಯಕರ್ತರು, ದಲಿತ ಸಂಘಟನೆಗಳು, ಪ್ರಗತಿಪರ, ಕಾರ್ಮಿಕ ಸಂಘಟನೆಗಳ ಮುಖಂಡರು ಜಾಥಾದಲ್ಲಿ ಪಾಲ್ಗೊಂಡರು.

ಈ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿದ ಸಂವಿಧಾನ ಜಾಗೃತಿ ಸಮಿತಿಯ ಸಭಾಧ್ಯಕ್ಷರು ಹಾಗೂ ಗಂಗಾವತಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಗಾಲಿ ಜನಾರ್ಧನರೆಡ್ಡಿಯವರು, ತಾಲೂಕಾಡಳಿತ ಹಾಗೂ ನಗರಾಡಳಿತ, ಸಮಾಜ ಕಲ್ಯಾಣ ಇಲಾಖೆ ಇವರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *