Breaking News

ಮಾಜಿ ಸಚಿವರ ಇಕ್ಬಾಲ್ಅನ್ಸಾರಿಯವರಿಗೆ ಎಂ.ಎಲ್.ಸಿ ಸ್ಥಾನ ನೀಡಿ,ಸಚಿವ ಸ್ಥಾನ ನೀಡಲು ಒತ್ತಾಯ.

Former minister Iqbal Ansari was given MLC seat. Forced to give ministerial post.

ಜಾಹೀರಾತು
Screenshot 2024 02 24 18 53 37 06 E307a3f9df9f380ebaf106e1dc980bb6 245x300

ಗಂಗಾವತಿ: ಮಾಜಿಸಚಿವ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕ ಇಕ್ಬಾಲ್ ಅನ್ಸಾರಿಯವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಜೊತೆಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಾಗೂ ಇಕ್ಬಾಲ್ ಅನ್ಸಾರಿಯವರ ಅಭಿಮಾನಿಯಾದ ಖಾಜಾಹುಸೇನ್ ದರ್ಗಾದ್ ಒತ್ತಾಯಿಸಿದ್ದಾರೆ.
ಪ್ರಾಮಾಣಿಕ ರಾಜಕಾರಣಿಯಾದ ಇಕ್ಬಾಲ್ ಅನ್ಸಾರಿಯವರು ತಮಗೆ ನೀಡಿದ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿ ಕಡಿಮೆ ಅವಧಿಯಲ್ಲಿ ಪ್ರಭಾವಿ ಮುಖಂಡರಾಗಿ ಹೊರಹೊಮ್ಮಿದ್ದಾರೆ. ಅವರು ಪಡೆದ ಮತಗಳೆ ಅವರ ಕಾರ್ಯ ವೈಖರಿಗೆ, ಜನಪ್ರಿಯತೆಗೆ ಸಾಕ್ಷಿಯಾಗಿದೆ. ಅನ್ಸಾರಿ ಅವರನ್ನು ಎಂಎಲ್‌ಸಿ ಮಾಡಬೇಕು. ಬಳಿಕ ಮಂತ್ರಿ ಸ್ಥಾನ ನೀಡಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಅನುಕೂಲವಾಗುತ್ತಿದೆ. ಅಲ್ಲದೇ ಅವರು ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಸದಸ್ಯತ್ವವನ್ನು ಮಾಡಿದ ರಾಜ್ಯಕ್ಕೆ ಮೊದಲನೆಯ ಸ್ಥಾನ ಪಡೆದಿದ್ದಾರೆ ಹಾಗೂ ಗಂಗಾವತಿ ಕ್ಷೇತ್ರಕ್ಕೆ ಶಾಸಕರಾಗಿ ಕೊಪ್ಪಳ ಜಿಲ್ಲೆಗೆ ಸಚಿವರಾಗಿ ಅಭಿವೃದ್ಧಿ ಮಾಡಿದ ಕೀರ್ತಿ ಅವರಿಗೆ ಇರುತ್ತದೆ ಅವರು ನಮ್ಮ ಪ್ರಭಾವಿ ನಾಯಕರು ಅಲ್ಪಸಂಖ್ಯಾತರ ನಾಯಕರು ಅವರಿಗೆ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಎಂ.ಎಲ್.ಸಿ ಸ್ಥಾನ ಕೊಟ್ಟರೆ ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಭಾವಗೊಳ್ಳುವುದು ಖಚಿತ ಎಂದು ಮನವಿ ಮಾಡಿದ್ದಾರೆ.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.