Breaking News

ಮಾಜಿ ಸಚಿವರ ಇಕ್ಬಾಲ್ಅನ್ಸಾರಿಯವರಿಗೆ ಎಂ.ಎಲ್.ಸಿ ಸ್ಥಾನ ನೀಡಿ,ಸಚಿವ ಸ್ಥಾನ ನೀಡಲು ಒತ್ತಾಯ.

Former minister Iqbal Ansari was given MLC seat. Forced to give ministerial post.

ಗಂಗಾವತಿ: ಮಾಜಿಸಚಿವ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕ ಇಕ್ಬಾಲ್ ಅನ್ಸಾರಿಯವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಜೊತೆಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಾಗೂ ಇಕ್ಬಾಲ್ ಅನ್ಸಾರಿಯವರ ಅಭಿಮಾನಿಯಾದ ಖಾಜಾಹುಸೇನ್ ದರ್ಗಾದ್ ಒತ್ತಾಯಿಸಿದ್ದಾರೆ.
ಪ್ರಾಮಾಣಿಕ ರಾಜಕಾರಣಿಯಾದ ಇಕ್ಬಾಲ್ ಅನ್ಸಾರಿಯವರು ತಮಗೆ ನೀಡಿದ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿ ಕಡಿಮೆ ಅವಧಿಯಲ್ಲಿ ಪ್ರಭಾವಿ ಮುಖಂಡರಾಗಿ ಹೊರಹೊಮ್ಮಿದ್ದಾರೆ. ಅವರು ಪಡೆದ ಮತಗಳೆ ಅವರ ಕಾರ್ಯ ವೈಖರಿಗೆ, ಜನಪ್ರಿಯತೆಗೆ ಸಾಕ್ಷಿಯಾಗಿದೆ. ಅನ್ಸಾರಿ ಅವರನ್ನು ಎಂಎಲ್‌ಸಿ ಮಾಡಬೇಕು. ಬಳಿಕ ಮಂತ್ರಿ ಸ್ಥಾನ ನೀಡಿದರೆ ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಅನುಕೂಲವಾಗುತ್ತಿದೆ. ಅಲ್ಲದೇ ಅವರು ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಸದಸ್ಯತ್ವವನ್ನು ಮಾಡಿದ ರಾಜ್ಯಕ್ಕೆ ಮೊದಲನೆಯ ಸ್ಥಾನ ಪಡೆದಿದ್ದಾರೆ ಹಾಗೂ ಗಂಗಾವತಿ ಕ್ಷೇತ್ರಕ್ಕೆ ಶಾಸಕರಾಗಿ ಕೊಪ್ಪಳ ಜಿಲ್ಲೆಗೆ ಸಚಿವರಾಗಿ ಅಭಿವೃದ್ಧಿ ಮಾಡಿದ ಕೀರ್ತಿ ಅವರಿಗೆ ಇರುತ್ತದೆ ಅವರು ನಮ್ಮ ಪ್ರಭಾವಿ ನಾಯಕರು ಅಲ್ಪಸಂಖ್ಯಾತರ ನಾಯಕರು ಅವರಿಗೆ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಎಂ.ಎಲ್.ಸಿ ಸ್ಥಾನ ಕೊಟ್ಟರೆ ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಭಾವಗೊಳ್ಳುವುದು ಖಚಿತ ಎಂದು ಮನವಿ ಮಾಡಿದ್ದಾರೆ.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.