ಕಲ್ಯಾಣಸಿರಿ ವಿಶೇಷ

ಮುಗ್ದ ರೈತರೊಂದಿಗೆ ಚಲ್ಲಾಟವಾಡುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು : ಮಾಜಿ ಶಾಸಕ ಆರ್ ನರೇಂದ್ರ ಆರೋಪ

Officials of Forest Department who are quarreling with innocent farmers: Former MLA R Narendra alleges.


ವರದಿ : ಬಂಗಾರಪ್ಪ ಸಿ
ಹನೂರು: ನಮ್ಮ ಕ್ಷೇತ್ರದಲ್ಲಿ ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆಯ ಕಿರಿಯ ಅಧಿಕಾರಿಗಳು ರೈತರು ಹಾಗೂ ನಾಗರಿಕರ ಮೇಲೆ ಹಲ್ಲೆ ನಡೆಸುತ್ತಿರುವುದು ಖಂಡನೀಯವಾದುದ್ದು ಎಂದು ಮಾಜಿ ಶಾಸಕ ಆರ್ ನರೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಹನೂರುಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಡಂಚಿನ ಗ್ರಾಮಗಳಲ್ಲಿ ಕಳೆದ ವಾರದಲ್ಲಿ ರೈತರುಗಳು ತಮ್ಮ ಜಮೀನಿನಲ್ಲಿ ಕಾಡಾನೆ ದಾಳಿಯಿಂದ ಪಸಲು ನಾಶವಾಗಿರುವುದರ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಲು ದೂರವಾಣಿ ಕರೆ ಮಾಡಿದ್ದಾರೆ. ಆದರೆ ಅವರು ಎರಡು ದಿನಗಳ ಕಳೆದರೂ ಬಾರದೆ ಇದ್ದಿದ್ದರಿಂದ ಮತ್ತೊಮ್ಮೆ ಕರೆ ಮಾಡಿ ಆನೆ ಸತ್ತು ಹೋಗಿದೆ ಎಂದು ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ರೈತರು ತಪ್ಪು ಮಾಹಿತಿ ನೀಡಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಕರೆಸಿಕೊಂಡಿರುವುದು ಮೇಲ್ನೋಟಕ್ಕೆ ತಪ್ಪಾಗಿರರಬಹುದು, ಆದರೆ ಅವರ ನೋವು ನಲಿವು ಸಂಕಟವನ್ನು ಹೇಳಿಕೊಳ್ಳಲು ಈ ರೀತಿ ಮಾಡಿದ್ದಾರೆ ಹೊರತು ಅನ್ಯ ಉದ್ದೇಶದಿಂದ ಅವರು ದೂರವಾಣಿ ಕರೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿರುವುದರಿಂದ ಈ ಪ್ರಕರಣಕ್ಕೆ ಸುಖಾಂತ್ಯಗೊಳಿಸಬೇಕು . ಈ ಸಂದರ್ಭದಲ್ಲಿ ರೈತರ ಬೆಳೆ ನಾಶಕ್ಕೆ ಪರಿಹಾರ ಕೊಡುವ ಬದಲು ಅವರ ಜೊತೆ ವಾಗ್ವಾದ ನಡೆಸಿ ಹಲ್ಲೇ ಮಾಡಿರುವುದು ಸರಿಯಾದ ಕ್ರಮವಲ್ಲ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆಯ ಕಿರಿಯ ಅಧಿಕಾರಿಗಳಿಗೆ ಇನ್ನು ಮುಂದೆ ರೈತರ ಮೇಲೆ ಹಲ್ಲೆ ಮಾಡದಂತೆ ಸೂಕ್ತ ನಿರ್ದೇಶನ ನೀಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರುಗಳು ಸೇರಿದಂತೆ ಇನ್ನಿತರರು ಹಾಜರಿದ್ದರು .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago