Hebbala Vidhan Sabha Constituency Publicity Program at HMT Maidan, RT Nagar
ಬೆಂಗಳೂರು:(ಫೆಬ್ರವರಿ 28):- ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ ಜರುಗಿತು.
ರಾಜ್ಯ ಸರ್ಕಾರದ ಪಂಚ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ನೆರೆದಿದ್ದ ಜನರಿಗೆ ಸಚಿವರಾದ ಶ್ರೀ ಬೈರತಿ ಸುರೇಶ ಅವರು ಕರೆ ನೀಡಿದರು.
ಅಲ್ಲದೇ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಹವಾಲು ಬಂದಾಗ, ಬೇಸಿಗೆ ಮುಗಿಯುವ ವರೆಗೂ ಕ್ಷೇತ್ರದಾದ್ಯಂತ 8 ಟ್ಯಾಂಕರ್ ಗಳನ್ನು ಒದಗಿಸಲಾಗಿದೆ. ಕಡಿಮೆ ಬಂದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒದಗಿಸಲಾಗುತ್ತದೆ ಎಂದು ಸಚಿವರಾದ ಶ್ರೀ ಬೈರತಿ ಸುರೇಶ ಅವರು ತಿಳಿಸಿದರು.
ಬೆಂಗಳೂರು ಜಲ ಮಂಡಲಿ ಅಧ್ಯಕ್ಷರಾದ ರಾಮ್ ಪ್ರಸಾದ್, ಬಿಬಿಎಂಪಿ ಅಪರ ಆಯುಕ್ತರಾದ ಆರ್.ಸ್ನೇಹಾಲ್, ಬಿಬಿಎಂಪಿ ಜಂಟಿ ಆಯುಕ್ತರಾದ ಪಲ್ಲವಿ, ಉಪ ಪೋಲಿಸ್ ಆಯುಕ್ತರು, ಆರೋಗ್ಯ ವೈದ್ಯಾಧಿಕಾರಿ, ಬೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಬಿಎಂಟಿಸಿ, ಆಹಾರ ಇಲಾಖೆ ಸೇರಿದಂತೆ ಕೆಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…