ಕಲ್ಯಾಣಸಿರಿ ವಿಶೇಷ

ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ  ಆಗ್ರಹಿಸಿ ಪ್ರತಿಭಟನೆ.

Protest demanding comprehensive development of Koppal district

ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ  ಆಗ್ರಹಿಸಿ ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ನಾಯಕರಾದ ಕಾಮ್ರೆಡ್ ಶರಣಪ್ಪ ಉದ್ಬಳ್ ಮಾತನಾಡಿ, “ಜಿಲ್ಲೆಯಲ್ಲಿ ತೀವ್ರವಾದ ಬರಗಾಲವಿದೆ. ರೈತರು-ಕೃಷಿ ಕೂಲಿ ಕಾರ್ಮಿಕರು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಬರ ಪರಿಹಾರ ನೀಡಿಲ್ಲ. ತೀವ್ರ ಬರಗಾಲವಿರುವುದರಿಂದ ಬರಗಾಲ ಕಾಮಗಾರಿ ಆರಂಭಿಸಿ ಕೂಲಿ ಕಾರ್ಮಿಕರ ಗುಳೆಯನ್ನು ತಪ್ಪಿಸಬೇಕು. ಜಾನುವಾರುಗಳಿಗೆ ಮೇವು ಕೇಂದ್ರಗಳನ್ನು ಸ್ಥಾಪನೆ ಮಾಡಬೇಕು” ಎಂದು ಆಗ್ರಹಿಸಿದರು.
“ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಉದ್ಯೋಗ ಸೃಷ್ಟಿಗೆ ಪೂರಕವಾದ ಉದ್ಯಮಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಬೇಕು.
“ಕೊಪ್ಪಳ ಜಿಲ್ಲೆಯ ಪಕ್ಕದಲ್ಲಿ ತುಂಗಭದ್ರ ಡ್ಯಾಮ್ ಇದ್ದರೂ ಸಹ ಜನರು ಕುಡಿಯುವ ನೀರಿಗೆ ಹಾಹಾಕಾರ ಪಡಬೇಕಾಗಿದೆ. ಕೊಪ್ಪಳ ನಗರದಲ್ಲಿ ಈಗ ಐದು ದಿನಕೊಮ್ಮೆ ನೀರು ಬಿಡಲಾಗುತ್ತಿದೆ.ಹಳ್ಳಿಗಳ ನೀರಿನ ವ್ಯವಸ್ಥೆಯಂತೂ ಅಯೋಮಯವಾಗಿದೆ. ಜಿಲ್ಲೆಯ ಬಹುತೇಕ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಕಸ ವಿಲೇವಾರಿ, ಚರಂಡಿ ಸ್ವಚ್ಛತೆ, ರಾಜಕಾಲುವೆಗಳ ಸ್ವಚ್ಛತೆ ನಿರಂತರವಾಗಿ ನಡೆಯುತ್ತಿಲ್ಲ.“ಬರಗಾಲದಲ್ಲಿ ನರೇಗಾ ಯೋಜನೆಯ ಮಾನವ ದಿನಗಳನ್ನು 150 ದಿನಗಳಿಗೆ ಹೆಚ್ಚಿಸಲು ಅವಕಾಶವಿದೆ. ಅದನ್ನು ಕೂಡಲೇ ಜಾರಿ ಮಾಡಬೇಕು. ಮನರೇಗಾ ಕೂಲಿಯನ್ನು ₹600ಕ್ಕೆ ಹಾಗೂ ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ಜಿಲ್ಲಾ ಮುಖಂಡ ಶರಣು ಗಡ್ಡಿ ಮಾತನಾಡಿ, “ ಜಿಲ್ಲಾ ಆಸ್ಪತ್ರೆಯಲ್ಲಿ  ತಜ್ಞವೈದ್ಯರ ನೇಮಕ ಮಾಡಬೇಕು. ಸಕಲ ಚಿಕಿತ್ಸೆ ಹಾಗೂ ಔಷಧಿಗಳು ಉಚಿತವಾಗಿ ಎಲ್ಲರಿಗೂ ನಿರಂತರವಾಗಿ ಸಿಗುವಂತಾಗಬೇಕು.ಅವೈಜ್ಞಾನಿಕವಾಗಿ  ಹಾಕಿರುವ ಹಿಟ್ನಾಳ್ ಟೋಲ್ ಪ್ಲಾಜವನ್ನು ತೆರವುಗೊಳಿಸಬೇಕು .“ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಶಾಲಾ ಕಾಲೇಜುಗಳಲ್ಲಿ ಬೋಧಕರ ಕೊರತೆ ತೀವ್ರವಾಗಿದ್ದು, ಶಾಲಾ ಕಾಲೇಜುಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಬೇಕು” ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ವಿತರಿಸಬೇಕು.
ಕೊಪ್ಪಳದ ಕಾಳಿದಾಸ ನಗರ, ಗಾಂಧಿ ನಗರ, ಕುವೆಂಪು ನಗರ, ಮುಂತಾದ ಏರಿಯಾಗಳಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಪರವಾಗಿ ರವಿಕುಮಾರ್ ವಸ್ತ್ರದ  ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಸದಸ್ಯರುಗಳಾದ ಶರಣು ಪಾಟೀಲ್, ಗಂಗರಾಜ, ದೇವರಾಜ, ಸಿದ್ದಲಿಂಗರೆಡ್ಡಿ, ಶಾರದ, ಮಂಜುಳಾ, ಮೌನೇಶ. ಸಾರ್ವಜನಿಕರಾದ , ಮುದಿಯಪ್ಪ, ಉಮೇಶ್, ದುರ್ಗಮ್ಮ, ದ್ಯಾಮಣ್ಣ ರೇಣುಕಮ್ಮ, ಯಮನೂರಪ್ಪ, ವಿರುಪಾಕ್ಷಿ,ಬಸರಾಜಪ್ಪ,, ಶಂಕ್ರಮ್ಮ ಬಸವರಾಜಪ್ಪ,ಮಂಗಳೆಶ್ ರಾಠೋಡ್, ಅಬ್ದುಲ್ ವಾಹಿದ್ ಮುದಿಯಪ್ಪ, ಗೌಡಪ್ಪ,ಸೇರಿದಂತೆ ಇತರರು ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago