ಕಲ್ಯಾಣಸಿರಿ ವಿಶೇಷ

ನೂರಾರು ರೈತರು ಮತ್ತು ಮಹಿಳೆಯರು ಮುತ್ತಿಗೆ ಹಾಕಿ ಪರಿಸರ ಮಾಲಿನ್ಯ ಮಹಾಮಂಡಳಿಯ ಅಧ್ಯಕ್ಷಶಾಂತತಿಮ್ಮಯ್ಯನಿಗೆ ತೀವ್ರ ತರಾಟೆ

Hundreds of farmers and women besieged the president of Environment Pollution Control Board, Shanta Thimmaiah.

ಕೆ.ಆರ್.ಪೇಟೆ:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರ ಮಂಡಳಿ ಪರಿಸರ ಭವನಕ್ಕೆ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಮಾಕವಳ್ಳಿ, ಕರೋಟಿ,ಕಾರಿಗನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿ,ಲಿಂಗಾಪುರ, ಮಾಣಿಕನಹಳ್ಳಿ, ರಾಮನಹಳ್ಳಿ, ಕುಂದನಹಳ್ಳಿ, ಬೀಚೇನಹಳ್ಳಿ, ಚೌಡೇನಹಳ್ಳಿ, ಸೇರಿದಂತೆ ಅನೇಕ ಗ್ರಾಮಗಳ ನೂರಾರು ರೈತರು ಮತ್ತು ಮಹಿಳೆಯರು ಮುತ್ತಿಗೆ ಹಾಕಿ ಪರಿಸರ ಮಾಲಿನ್ಯ ಮಹಾಮಂಡಳಿಯ ಅಧ್ಯಕ್ಷ ಶಾಂತ ತಿಮ್ಮಯ್ಯನಿಗೆ ತೀವ್ರ ತರಾಟೆಗೆ ತೆಗೆದುಕೊಂಡು ಅನಿರ್ದಿಷ್ಟಾವಧಿಯ ಹೋರಾಟದ ಎಚ್ಚರಿಕೆ ನೀಡಿದರು

ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಡಿಸ್ಟಿಲರಿ ಘಟಕವನ್ನು ಸ್ಥಾಪಿಸುವ ಏಕೈಕ ಉದ್ದೇಶದಿಂದ ದಿನಾಂಕ: 06.03.2024ರಂದು ಕರೆದಿರುವ ಸಾರ್ವಜನಿಕ ಸಭೆಯನ್ನು ರದ್ದು ಮಾಡಿ, ಕೋರಮಂಡಲ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕೇವಲ ಹಾಲಿ ನಡೆಯುತ್ತಿರುವ ಕಬ್ಬು ಅರೆಯುವಿಕೆಯನ್ನು ಹೊರತುಪಡಿಸಿ,ಎಥಲಾಲ್ ಡಿಸ್ಪಿಲರಿ ಘಟಕವನ್ನು ಸ್ಥಾಪನೆ ಮಾಡದಂತೆ ಮತ್ತು ಈ ಎಥನಾಲ್ ಡಿಸ್ಟಿಲರಿ ಘಟಕ ಸ್ಥಾಪನೆಯ ಪ್ರಸ್ತಾವನೆಯನ್ನು ಶಾಶ್ವತವಾಗಿ ಕೈಬಿಡುವಂತೆ ಒತ್ತಾಯಿಸುವುದಕ್ಕಾಗಿ.

ಬೆಂಗಳೂರು ನಗರದಲ್ಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಭವನಕ್ಕೆ 350ಕ್ಕೂ ಹೆಚ್ಚು ರೈತ ಮುಖಂಡರು ತೆರಳಿ ಕೋರಮಂಡಲ ಸಕ್ಕರೆ ಕಾರ್ಖಾನೆ ವಿರುದ್ಧ ವಿರುದ್ಧ ಘೋಷಣೆ ಕೂಗುತ್ತಾ ಮಾತನಾಡಿದ ರೈತ ಸಂಘದ ಹಿರಿಯ ಮುಖಂಡ ಮದುಗೆರೆ ರಾಜೇಗೌಡ 2011ನೇ ಸಾಲಿನಲ್ಲಿ ಎಥನಾಲ್ ಡಿಸ್ಟಿಲರಿ ಮತ್ತು ವಿದ್ಯುತ್ ಕೋಜನರೇಶನ್ ಘಟಕಗಳಿಗೆ ಹೊಸ ವಿನೂತನ ತಂತ್ರಜ್ಞಾನವನ್ನು ಅಳವಡಿಸುತ್ತೇವೆಂದು ಯೋಜನೆಯಲ್ಲಿ ಒಪ್ಪಿಕೊಂಡಿರುವ ಕಾರ್ಖಾನೆ ಆದರೆ ಈ ಅಂಶವನ್ನು ಜಾರಿಗೊಳಿಸದೇ ಹಳೆಯ ತಂತ್ರಜ್ಞಾನವನ್ನೇ ಮುಂದುವರಿಸುತ್ತಾ ಅದನ್ನು ಸೂಕ್ತ ನಿರ್ವಹಣೆ ಇಲ್ಲದೆ ವಿಷಕಾರಿ ಹಾರುವ ಬೂದಿ ಭಾಗ್ಯ ನೀಡುವುದರ ಮೂಲಕ ಕಾರ್ಖಾನೆಯ ಅಕ್ಕ ಪಕ್ಕದ ಜನರ ಬದುಕಿನ ಜೊತೆ ಕಲ್ಲಾಟವಾಡುತ್ತಿದೆ ಇಂತಹ ಬೇಜವಾಬ್ದಾರಿತನ ಕಾರ್ಖಾನೆ ಆಡಳಿತ ಮಂಡಳಿಯ ಆವರಣದಲ್ಲಿ ಅಪಾಯಕಾರಿ ಘಟಕಗಳಂತಹ ಎಥನಾಲ್ ಮತ್ತು ಡಿಸ್ಪೀಲರಿ ನಿರ್ಮಾಣವಾದರೆ ಕಾರ್ಖಾನೆ ವ್ಯಾಪ್ತಿಯ ಗ್ರಾಮಗಳ ರೈತರ ಬದುಕು ನರಕವಾಗುವುದು ಕಟ್ಟಿಟ್ಟ ಬುತ್ತಿ ಅಲ್ಲವೇ..? ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ನಿಮ್ಮ ಕೇಂದ್ರ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ ಪರಿಣಾಮವಾಗಿ ನೀವು ಕಾರ್ಖಾನೆಗೆ ಕಾಟಾಚಾರಕ್ಕೆ ಆಗಮಿಸಿ ಕಳ್ಳರಂತೆ ಕಾರ್ಖಾನೆಯ ಹಿಂಭಾಗಲಿನಿಂದ ಹೋಗಿದ್ದೀರಿ ಎಂದು ಪರಿಸರ ಮಾಲಿನ್ಯ ಮಂಡಳಿಯ ಅಧ್ಯಕ್ಷ ಶಾಂತ ತಿಮ್ಮಯ್ಯ ರವರಿಗೆ ತರಾಟೆಗೆ ತೆಗೆದುಕೊಂಡು.ಹೇಮಾವತಿ ನದಿ ಸಮೀಪವಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಸ್ಥಾಪನೆಗೊಂಡದಿನದಿಂದ ಈ ದಿನದವರೆಗೂ ಸುತ್ತಮುತ್ತಲಿನಲ್ಲಿರುವ ರೈತ ಬೆಳೆಯುವ ಫಸಲುಗಳ ಮೇಲೆ ಪರಿಣಾಮಕಾರಿಯಾಗಿ ಮಾಲಿನ್ಯ ಎದುರಾಗುತ್ತಿದೆ.ಇದರ ಬಗ್ಗೆ ಕೇಂದ್ರ ಕಚೇರಿಯಿಂದ ಹಿಡಿದು ತಾಲೂಕು ಕಚೇರಿಯವರೆಗೂ ಹಲವು ಚಳುವಳಿ ಮತ್ತು ಹೋರಾಟ ನಡೆಸಿದರು ನೀವು ಒಳಗೊಂಡಂತೆ ಇಲಾಖೆ ಅಧಿಕಾರಿಗಳು ತಮಗೆ ಸಂಬಂಧವಿಲ್ಲದ ರೀತಿ ಕಾರ್ಖಾನೆಯ ತಾಳಕ್ಕೆ ತಕ್ಕಂತೆ ಕುಣಿಯುತ್ತ ಕಣ್ಮುಚ್ಚಿ ಕುಳಿತಿದ್ದೀರಿ ಇಂಥವರ ಮುಂದೆ ಹತ್ತಾರು ಚಳುವಳಿ ನಡೆಸಿದರು ಕೋಣನ ಮುಂದೆ ಕಿಂದರಿ ಬಾರಿಸಿದಂತಾಗಿದೆ, ಹಾಗಾಗಿ ಈ ದಿನವೇ ನಿಶ್ಚಯವಾಗಬೇಕು. ಶಾಶ್ವತವಾಗಿ ಇಂತಹ ಅಪಾಯಕಾರಿ ಘಟಕ ನಿರ್ಮಾಣ ವಿರಲಿ ಇದರ ಬಗ್ಗೆ ಚಿಂತನೆಯೂ ಕೂಡ ಮಾಡಬಾರದು ಎಂದು ಲಿಖಿತವಾಗಿ ನಮಗೆ ನೀಡಿದರೆ ಮಾತ್ರ ಈ ಶಾಂತಿಯುತ ಹೋರಾಟವನ್ನು ಹಿಂಪಡೆಯುತ್ತೇವೆ ಇಲ್ಲದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಸಿದ್ಧರಿದ್ದೇವೆ ಎಂದು ಎಚ್ಚರಿಸಿ ಕಚೇರಿಯಲ್ಲಿ ಹೋರಾಟ ಮುಂದುವರಿಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳ 350ಕ್ಕೂ ಹೆಚ್ಚು ರೈತರು ಮತ್ತು ಮಹಿಳೆಯರು ಹಾಗೂ ರೈತ ಪರ ಹೋರಾಟಗಾರರು ಮತ್ತು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.

ವಿಶೇಷ ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago