ಕಲ್ಯಾಣಸಿರಿ ವಿಶೇಷ

ಚಾಲಕ ವೃತ್ತಿಯೆ ನಮಗೆ ಜೀವಾಳ ಮಾಜಿ ಶಾಸಕ ಆರ್ ನರೇಂದ್ರರ ಮುಂದೆಚಾಲಕರಅಳಲು

The driver’s career is life for us, the cry of the drivers in front of former MLA R Narendra.


ವರದಿ : ಬಂಗಾರಪ್ಪ ಸಿ .
ಹನೂರು: ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುವ ಭಕ್ತಾದಿಗಳನ್ನು ಇಂಡಿಗನತ್ತ ಗ್ರಾಮದವರೆಗೆ ಕರೆದೊಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಅವಕಾಶ ಮಾಡಿಸಿ ಕೊಡುವಂತೆ ಜೀಪ್ ಗಳ ಚಾಲಕರು ಮಾಜಿ ಶಾಸಕ ಆರ್ ನರೇಂದ್ರರವರಿಗೆ ಮನವಿ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು .

ಇತ್ತೀಚಿನ ದಿನಗಳಲ್ಲಿ ಅರಣ್ಯ ವ್ಯಾಪ್ತಿಯಲ್ಲಿ ಚಾರಣ ಮಾಡುವ ಹವ್ಯಾಸ ಅಧಿಕವಾಗಿದ್ದು ವಾರಾಂತ್ಯದಲ್ಲಿ ಜನ-ದಟ್ಟಣೆಗೆ ಕಾರಣವಾಗಿದೆ. ಹೀಗೆ ಬರುವವರು ಅರಣ್ಯದಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬಾಟಲಿ, ತಟ್ಟೆ ಉಳಿದ ಆಹಾರ ಪದಾರ್ಥ ಇತ್ಯಾದಿಗಳನ್ನು ಎಸೆಯುತ್ತಿದ್ದು ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವ ಹಿನ್ನೆಲೆ ಮಲೆ ಮಹದೇಶ್ವರ ವನ್ಯಜೀವಿಧಾಮವಾದ ನಾಗಮಲೆ ದರ್ಶನಕ್ಕೆ ಆನ್ಲೈನ್ ನಲ್ಲಿ ಬುಕ್ ಮಾಡಿ ಅನುಮತಿ ಪಡೆದ ನಂತರ ಭಕ್ತರು ನಾಗಮಲೆಗೆ ಹೋಗಬಹುದಾಗಿತ್ತು.
ಇದಲ್ಲದೆ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವವರನ್ನು ಜೀಪ್ ಗಳಲ್ಲಿ ಕರೆದೊಯ್ಯುತ್ತಿದ್ದರು ಇದಕ್ಕೂ ಸಹ ನಿರ್ಬಂಧ ಹೇರಲಾಗಿತ್ತು.
ಈ ನಿಟ್ಟಿನಲ್ಲಿ ಮಾಜಿ ಶಾಸಕರಾದ ಆರ್ ನರೇಂದ್ರ ಮಾತನಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತರಲು ಅವಕಾಶ ಮಾಡಿಕೊಡದೆ ನಾಗಮಲೆಗೆ ಭಕ್ತಾದಿಗಳು ತೆರಳಲು ಅವಕಾಶ ಮಾಡಿಕೊಡಬೇಕೆಂದು ಪತ್ರಿಕಾಗೋಷ್ಠಿ ನಡೆಸಿದ್ದರು.
ಈ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿನ ಜೀಪ್ ಚಾಲಕರುಗಳು ಹಾಗೂ ಮಾಲೀಕರು ಮಾಜಿ ಶಾಸಕ ಆರ್ ನರೇಂದ್ರರವರ ಕೊಳ್ಳೇಗಾಲ ನಿವಾಸದಲ್ಲಿ ಭೇಟಿಯಾಗಿ ನಾವು ಭಕ್ತಾದಿಗಳನ್ನು ನಂಬಿಯೇ ಜೀವನ ನಡೆಸುತಿದ್ದೇವೆ. ಸಾಲ ಮಾಡಿ ವಾಹನಗಳನ್ನು ತೆಗೆದುಕೊಂಡಿದ್ದೇವೆ, ಇದೀಗ ನಮ್ಮ ಮಕ್ಕಳ ಪರೀಕ್ಷಾ ಸಮಯವಾಗಿರುವುದರಿಂದ ಜೀವನಕ್ಕೆ ತೊಂದರೆಯಾಗಿದೆ. ಇನ್ನೆರಡು ತಿಂಗಳಲ್ಲಿ ಶಾಲೆಗಳು ಪ್ರಾರಂಭವಾಗಲಿದೆ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕವನ್ನು ಸಹ ಕಟ್ಟಲು ನಮ್ಮಲ್ಲಿ ಹಣವಿಲ್ಲ, ನಮಗೆ ಈ ಚಾಲಕ ವೃತ್ತಿ ಬಿಟ್ಟರೆ ಯಾವುದೇ ವೃತ್ತಿ ಗೊತ್ತಿಲ್ಲ, ಕಳೆದ 15 ದಿನಗಳಿಂದ ಅರಣ್ಯ ಇಲಾಖೆಯವರು ಜೀಪ್ ಹೋಗುವುದಕ್ಕೆ ನಿರ್ಬಂಧ ಹೇರಿರುವುದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ ಆದ್ದರಿಂದ ತಾವುಗಳು ಸರ್ಕಾರದ ಜೊತೆ ಮಾತನಾಡಿ ನಮ್ಮ ಜೀವನ ನಡೆಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸ್ಥಳದಲ್ಲಿಯೇ ಮಾಜಿ ಶಾಸಕ ಆರ್ ನರೇಂದ್ರ ಡಿಸಿಎಫ್ ಸಂತೋಷ್ ಕುಮಾರ್ ರವರ ಜೊತೆ ದೂರವಾಣಿ ಮುಖಾಂತರ ಮಾತನಾಡಿ ವಾಹನಗಳ ಇನ್ಸೂರೆನ್ಸ್, ಚಾಲನಾ ಪರವಾನಿಗೆ, ನವೀಕರಣ, ಸೇರಿದಂತೆ ಇನ್ನಿತರ ದಾಖಲಾತಿ ಸರಿ ಇರುವವರಿಗೆ ಅವಕಾಶ ಮಾಡಿಕೊಡಬೇಕು, ಸರ್ಕಾರದ ನಿಯಮದಂತೆ ಅವರ ವಾಹನಗಳಲ್ಲಿ ಎಷ್ಟು ಜನರನ್ನು ಕರೆದೊಯ್ಯಬೇಕು ಅದರ ನಿಯಮವನ್ನು ಪಾಲಿಸಲು ಅವರಿಗೆ ಸೂಚನೆ ನೀಡಿ ಅವಕಾಶ ಕಲ್ಪಿಸಿಕೊಡಲು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಮಲೆ ಮಾದೇಶ್ವರ ಬೆಟ್ಟದ ಮುಖಂಡರು ಸರ್ಕಾರದ ನಿಯಮದಂತೆ ನಮ್ಮ ವಾಹನಗಳಲ್ಲಿ ಎಷ್ಟು ಜನರನ್ನು ಕರೆದೊಯ್ಯಬೇಕು ಅಷ್ಟೇ ಜನರನ್ನು ಕರೆದುಕೊಂಡು ಹೋಗುತ್ತೇವೆ. ಭಕ್ತಾದಿಗಳಿಗೆ ಯಾವುದೇ ತೊಂದರೆ ಕೊಡುವುದಿಲ್ಲ ನಮ್ಮ ಜೀವನಕ್ಕೆ ನೀವೇ ದಾರಿದೀಪವಾಗಬೇಕು ಎಂದು ಮನವಿ ಮಾಡಿದರು.

ಭೇಟಿಯ ವೇಳೆ ಕಾಂಗ್ರೆಸ್ ಮುಖಂಡರಾದ ತಲಕಾಡು ಶಿವಕುಮಾರ್, ಇಂಡಿಗನತ್ತ ವೀರಣ್ಣ,ಗೌಡ್ರು ಪುಟ್ಟರಾಜು . ಹುಚ್ಚಪ್ಪ,ಪಡಸಲನತ್ತ ರವಿ, ಮಲೆ ಮಹದೇಶ್ವರ ಬೆಟ್ಟದ ವೀರಸ್ವಾಮಿ, ಶಿವಣ್ಣ ಸೇರಿದಂತೆ 50ಕ್ಕೂ ಹೆಚ್ಚು ಚಾಲಕರು ಸೇರಿದಂತೆ ಇತರರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago