ಕಲ್ಯಾಣಸಿರಿ ವಿಶೇಷ

ಬಿಜೆಪಿ ಎಸ್ಟಿ ಮೋರ್ಚಗೆ ವೀರಭದ್ರಪ್ಪ ನಾಯಕ ಆಯ್ಕೆ

Veerabhadrappa elected leader of BJP ST Morcha

ಗಂಗಾವತಿ,09:  ಕರ್ನಾಟಕ ರಾಜ್ಯ  ಎಸ್ಟಿ ಮೋರ್ಚಾ ಕಾರ್ಯಕಾರಿಣಿ  ಪದಾಧಿಕಾರಿಗಳ ಆಯ್ಕೆಯಲ್ಲಿ ಗಂಗಾವತಿ ನಗರದ ಬಿಜೆಪಿ ಹಿರಿಯ ನಾಯಕ ವೀರಭದ್ರಪ್ಪ ನಾಯಕ ವಡ್ರಟ್ಟಿ ಇವರನ್ನು ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಿ ಬಿಜೆಪಿ ಎಸ್ಟಿ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ದಿನಾಂಕ 6.3.2024 ರಂದು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ. ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿತವಾಗಿ ನಿರ್ವಹಿಸುತ್ತಾ, ಬಿಜೆಪಿ ಸಂಘಟನೆಯನ್ನು ತಳಮಟ್ಟದಲ್ಲಿ ಸಂಘಟಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ, ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕೆಂದು ರಾಜ್ಯಾಧ್ಯಕ್ಷ ಬಂಗಾರ ಹನುಮಂತು ಆದೇಶ ಪತ್ರದಲ್ಲಿ ಹೇಳಿದ್ದಾರೆ. ಸ್ಥಳೀಯ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಶಿಫಾರಸ್ಸಿನ ಮೇಲೆ ಬಿಜೆಪಿ ರಾಜ್ಯ ಎಷ್ಟು ಮೋರ್ಚ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿರುವ ವೀರಭದ್ರಪ್ಪ ನಾಯಕ ವಡ್ರಟ್ಟಿ ಇಂದು ಮಾಜಿ ಶಾಸಕರಾಗಿ ಭೇಟಿಯಾಗಿ ಸನ್ಮಾನ ಮಾಡಿದರು ಮತ್ತು  ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಪದಾಧಿಕಾರಿಗಳ ಆಯ್ಕೆಯನ್ನು ಬದಲಾವಣೆ ಮಾಡಿ ರಾಜ್ಯಾದ್ಯಂತ ಬಿಜೆಪಿ ಹೊಸ ಯುವಪಡೆಯನ್ನು ಕಟ್ಟಿಕೊಟ್ಟಿದೆ. ಅದರಂತೆ ಗಂಗಾವತಿ ನಗರದ ವೀರಭದ್ರಪ್ಪ ನಾಯಕ ವಡ್ರಹಟ್ಟಿ ಇವರು  ಪಕ್ಷದಲ್ಲಿ ಹಿರಿಯರಿದ್ದು. ಮತ್ತು ಪಕ್ಷ ಸಂಘಟನೆಯಲ್ಲಿ ಮುಂಚೂಣಿಯ ಜವಾಬ್ದಾರಿಯನ್ನು ಹೊತ್ತುಕೊಂಡು ಬಿಜೆಪಿಗಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ. ಇಂಥವರ ಸೇವೆಯನ್ನು ಗುರುತಿಸಿ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಕಾರ್ಯಕಾರಣಿಗೆ ಸದಸ್ಯರನ್ನಾಗಿ ನೇಮಕ ಮಾಡಿದ್ದು ಬಿಜೆಪಿಗೆ ಈ ಭಾಗದಲ್ಲಿ ಮತ್ತಷ್ಟು ಬಲಬಂದಂತಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಚನ್ನಪ್ಪ ಮಳಿಗಿ, ನಗರ ಘಟಕ ಅಧ್ಯಕ್ಷ ಕಾಶೀನಾಥ ಚಿತ್ರಗಾರ, ನಗರ ಕಾರ್ಯದರ್ಶಿ ಸಂಗಯ್ಯ ಸ್ವಾಮಿ ಸಂಶಿ ಮಠ, ಮಾಜಿ ನಗರಸಭಾ ಅಧ್ಯಕ್ಷ ಹನುಮಂತಪ್ಪ ನಾಯಕ, ಮಾಜಿ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಹೊಸಮಲಿ ಹನುಮಂತಪ್ಪ, ವಾಲ್ಮೀಕಿ ಸಮಾಜ ಹಿರಿಯರಾದ ಜೋಗದ ನಾರಾಯಣಪ್ಪ ನಾಯಕ, ಪಕ್ಷದ ಮುಖಂಡರಾದ ಟಿ.ಆರ್.ರಾಯಬಾಗಿ, ಪರಶುರಾಮ ನಾಯಕ, ಮೋಹನ್ ಸಿಂಗ್, ವಿಟ್ಟಪ್ಪ, ಕನಕಪ್ಪ ನಾಯಕ, ಹನುಮಂತಪ್ಪ ಶಿಲ್ಪಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago