Breaking News

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಸಿರುವ ಬಗ್ಗೆ

Regarding installation of unauthorized banners in public places:

ಜಾಹೀರಾತು

ನಗರದ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡ ಹತ್ತಿರ ಅಳವಡಿಸಿಸ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ 50000 ರೂ. ದಂಡ ವಿಧಿಸಲಾಗಿದೆ.

ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೇಸ್ ಅಭ್ಯರ್ಥಿ, ಕೆ.ಪಿ.ಸಿ.ಸಿ ಕೋ-ಅರ್ಡಿನೇಟರ್ ಹಾಗೂ ಎ.ಬಿ.ಡಿ.ಗ್ರೂಪ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ರಾಜೀವ್ ಗೌಡ ರವರು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರಾದ ಶ್ರೀ ಕೆ.ಹೆಚ್.ಮುನಿಯಪ್ಪ ರವರ ಜನ್ಮ ದಿನಾಚರಣೆಯ ಅಂಗವಾಗಿ ಅನಧಿಕೃತವಾಗಿ ಬ್ಯಾನರ್ ಅನ್ನು ಅಳವಡಿಸಿರುವುದು ಕಂಡುಬಂದಿರುತ್ತದೆ.

ಸದರಿ ಸ್ವತ್ತಿನಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆವತಿಯಿಂದ ಅಧಿಕೃತವಾಗಿ ಪರವಾನಿಗೆ/ಅನುಮತಿಯನ್ನು ಪಡೆದಿರುವುದಿಲ್ಲ. ಮೇಲ್ಕಂಡ ಉಲ್ಲೇಖಗಳ ಆಧಾರ 50000 ರೂ. ದಂಡ ವಿಧಿಸಿ ಪಾಲಿಕೆ ಮಾನ್ಯ ಮುಖ್ಯ ಆಯುಕ್ತರು ರವರ ಖಾತೆಗೆ ಪಾವತಿಸುವಂತೆ ವಸಂತನಗರದ ಸಹಾಯಕ ಕಂದಾಯ ಅಧಿಕಾರಿ ರವರು ಪತ್ರದ ಮೂಲಕ ಸೂಚಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಪತ್ರದ ಪ್ರತಿಯನ್ನು ಲಗತ್ತಿಸಲಾಗಿದೆ.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.