Election of Officers for Mining Society
ಗಂಗಾವತಿ : ಯಾವುದೇ ಒಂದು ಸಮುದಾಯ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂಘಟನೆ ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಮಾಜ ಸಂಘಟಿತವಾಗಬೇಕಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶರಣಪ್ಪ ನಾಗೋಜಿ ಅವರು ಹೇಳಿದರು.
ನಗರದ ಹಿರೇ ಜಂತಕಲ್ ನ ಬಸವ ಭವನದಲ್ಲಿ ಸೋಮವಾರ ಆಯೋಜಿಸಿದ ತಾಲೂಕ ಗಾಣಿಗ ಸಮಾಜದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸದೃಢ ಸಮಾಜ ನಿರ್ಮಾಣಕ್ಕೆ ಸಂಘಟನೆ ಅಗತ್ಯವಾಗಿದ್ದು, ಅನ್ಯ ಸಮುದಾಯವನ್ನು ಗೌರವಿಸುತ್ತಾ ಸಂಘಟಿತರಾಗಬೇಕು. ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಗಾಣಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಂಘಟನೆ ಇಲ್ಲವಾದ್ದರಿಂದ ಸಮಾಜ ಅಭಿವೃದ್ಧಿ ಹೊಂದುತ್ತಿಲ್ಲ. ಸಂಘಟನೆ ಅಭಾವದಿಂದ ಯುವ ಸಮೂಹ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷ ಣಿಕವಾಗಿ ಮುಂದುವರಿಯುತ್ತಿಲ್ಲ. ಸಮಾಜದ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.
ಗಾಣಿಗ ಸಮಾಜದ ಜಿಲ್ಲಾ ಅಧ್ಯಕ್ಷ ತೋಟಪ್ಪ ಕಾಮನೂರು ಅವರು ಮಾತನಾಡಿ, ಸಮಾಜದ ಮುಖಂಡರು ಸಂಘಟನೆಯಲ್ಲಿ ತೊಡಗಬೇಕು. ಆಯ್ಕೆ ಆದ ಪದಾಧಿಕಾರಿಗಳು ಸಮಾಜ ಅಭಿವೃದ್ಧಿ ಪೂರಕ ಕಾರ್ಯಗಳನ್ನು ಮಾಡಬೇಕು. ಸರಕಾರದಿಂದ ಸಮಾಜಕ್ಕೆ ಸಿಗುವ ಸೌಲಭ್ಯಗಳನ್ನು ಸಮುದಾಯದ ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು.
ಈ ವೇಳೆ ಜಿಲ್ಲಾ ಘಟಕದ ಗಾಣಿಗ ಸಮಾಜದ ಗೌರವಾಧ್ಯಕ್ಷ ರುದ್ರಮುನಿ ಗಾಳಿ, ಅಖಿಲ ಭಾರತ ಗಾಣಿಗ ಸಮಾಜದ ಉಪಾಧ್ಯಕ್ಷ ಸಂಗನಗೌಡ ಪಾಟೀಲ್, ಅಖಿಲ ಭಾರತ ಗಾಣಿಗ ಸಮಾಜದ ಕಾರ್ಯದರ್ಶಿ ವೀರಣ್ಣ ಗಾಣಿಗೇರ್, ಜಿಲ್ಲಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ಉಮೇಶ ಸಜ್ಜನ, ಸಮಾಜದ ಹಿರಿಯರು ಹಿರೇಬಸಪ್ಪ ಸಜ್ಜನ, ಜಿ.ಶಿವಲಿಂಗಪ್ಪ, ವೈ.ಸೋಮಪ್ಪ, ಸಂಗಪ್ಪ ಸಜ್ಜನ, ಮಹಾಂತೇಶ ಸಜ್ಜನ ಕನಕಗಿರಿ, ಅಶೋಕ ಸಜ್ಜನ ಖಾಧಿ ಭಂಡಾರ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರ, ಶ್ರೀದೇವಿ ನಾಗರಾಜ, ಶರಣಪ್ಪ ಕಲ್ಗುಡಿ ಸಿ.ಬಿ.ಎಸ್. ಶಿವಪುತ್ರಪ್ಪ ಗುಡ್ಡದ ಕ್ಯಾಂಪ್, ಹಾಗೂ ಗಾಣಿಗ ಸಮಾಜದ ನಗರ ಘಟಕದ ಪದಾಧಿಕಾರಿಗಳು ಇದ್ದರು.
ತಾಲೂಕು ಅಧ್ಯಕ್ಷರಾಗಿ ಶಿವಪುತ್ರಪ್ಪ ನೇಮಕ
ಪದಾಧಿಕಾರಿಗಳ ನೇಮಕ: ಗಂಗಾವತಿ ತಾಲೂಕಾ ಗಾಣಿಗ ಸಮಾಜದ ನೂತನ ಗೌರವಾಧ್ಯಕ್ಷರಾಗಿ ಶ್ರೀದೇವಿ ನಾಗರಾಜ, ತಾಲೂಕಾಧ್ಯಕ್ಷರಾಗಿ ಶಿವಪುತ್ರಪ್ಪ ಗುಡ್ಡದಕ್ಯಾಂಪ್ ವಡ್ಡರಹಟ್ಟಿ, ಉಪಾಧ್ಯಕ್ಷರಾಗಿ ಶರಣಪ್ಪ ಕಲ್ಗುಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ ಮಾಲಿಪಾಟೀಲ್ ಜಂಗಮರ ಕಲ್ಗಡಿ, ಖಜಾಂಚಿ ಚಂದ್ರಪ್ಪ ಸೊಕ್ಕೆ, ಸದಸ್ಯರಾಗಿ ಮಲ್ಲಿಕಾರ್ಜುನ ಜೋಗಿನ ಜ.ಕಲ್ಗುಡಿ, ಶರಣಬಸವ ಹುನಗುಂದ ಗಂಗಾವತಿ, ಗವಿಸಿದ್ದಪ್ಪ ಸಜ್ಜನ ಹೇರೂರು, ಶರಣಪ್ಪ ಕುದುರಕೊಟಗಿ ಬಸಾಪಟ್ಟಣ, ನಾಗೇಶ ಹುಣಿಸಿಹಾಳ ಹಣವಾಳ, ಬಸಪ್ಪ ಬಚ್ಚಿನಾಳ ಅಯೋದ್ಯ, ಶಂಕ್ರಪ್ಪ ಕುರಹಟ್ಟಿ ಶರಣಬಸವೆಶ್ವರ ನಗರ, ಭುವನೇಶಪ್ಪ ಹಿರೆಜಂತಕಲ್, ವಿಜಯಕುಮಾರ ಕುಷ್ಟಗಿ, ಎಂ.ನಾಗರಾಜ ಹಿರೇಜಂತಕಲ್, ಶಶಿಕುಮಾರ ಗಡ್ಡಿ, ಮುದಿಯಪ್ಪ ಬಾಬುರೆಡ್ಡಿಕ್ಯಾಂಪ್, ನಾಗರಾಜ ಗಡ್ಡಿ ಹಿರೇಜಂತಕಲ್, ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ರತ್ನಮ್ಮ ಚೆನ್ನಬಸಪ್ಪ ಹಿರೇಜಂತಕ್ ಇವರನ್ನು ಆಯ್ಕೆ ಮಾಡಲಾಯಿತು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…