ಕಲ್ಯಾಣಸಿರಿ ವಿಶೇಷ

ನಗರದ ಶಂಕರಮಠದಲ್ಲಿ ಆರನೇವರ್ಷದವಾರ್ಷಿಕೋತ್ಸವ

Sixth anniversary celebrations at Sankara Math in the city

ಗಂಗಾವತಿ 21 ಸನಾತನ ಧರ್ಮದ ಜಾಗೃತಿ ಜೊತೆಗೆ ಸಮಾಜದಲ್ಲಿರುವ ಆಸ್ತಿಕ ಬಡ ವರ್ಗದವರಿಗೆ ಸಮಾಜಮುಖಿ ಕಾರ್ಯಗಳನ್ನು ನಡೆಸಲು ಶೃಂಗೇರಿಯ ಉಭಯ ಜಗದ್ಗುರುಗಳು ಸಮ್ಮತಿಸಿದ್ದಾರೆ ಎಂದು ಗಂಗಾವತಿ ಶೃಂಗೇರಿ ಮಠದ ಧರ್ಮಾಧಿಕಾರಿ ನಾರಾಯಣರಾವ್ ವೈದ್ಯ ಹೇಳಿದರು ಅವರು ಬುಧವಾರದಂದು ಶೃಂಗೇರಿ ಶಾಖಾಮಠದ ಆರನೇ ವಾರ್ಷಿಕೋತ್ಸವ ಪ್ರಯುಕ್ತ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿ ಯಾವುದೇ ಜಾತಿ ಮತ ಭೇದವಿಲ್ಲದೆ ಸಮಾಜದಲ್ಲಿರುವ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ (ಸ್ಕಾಲರ್ಶಿಪ್) ವಿದ್ಯಾರ್ಥಿ ವೇತನ ಗೋ ಸಂರಕ್ಷಣೆಗಾಗಿ ಧನಸಹಾಯ ಸೇರಿದಂತೆ ಪರಿಸರ ಸಂರಕ್ಷಣೆಗಾಗಿ ಸಸಿ ಹಾಕುವಿಕೆ ಇತರೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ನಡೆಸಲಾಗುತ್ತದೆ ಎಂದು ತಿಳಿಸಿದ ಅವರು ಶೃಂಗೇರಿ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಸನ್ಯಾಸತ್ವ ಪಡೆದ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಯೋಜನೆಗಳನ್ನು ನಡೆಸುವಂತೆ ಆಡಳಿತ ಅಧಿಕಾರಿಗಳಾದ ಪಿ ಮುರುಳಿ ಹಾಗೂ ಗೌರವ ಸಲಹೆಗಾರರಾದ ಸೇವಾದುರಿನ ವಿಆರ್ ಗೌರಿಶಂಕರ್ ಎಲ್ಲಾ ಶಂಕರ ಮಠಗಳಲ್ಲಿ ಆದೇಶಿಸಿದ್ದಾರೆ ಎಂದು ತಿಳಿಸಿದರು ಬಳಿಕ ವೇದಾ ಬಾಯಿ ದೇಸಾಯಿ ಅವರು ಗಂಗಾವತಿಯಲ್ಲಿ ಶಂಕರ ಮಠ ಬೆಳೆದು ಬಂದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು ಇದಕ್ಕೂ ಪೂರ್ವದಲ್ಲಿ ಬೆಳಿಗ್ಗೆ ಶಕ್ತಿ ಗಣಪತಿ ಶ್ರೀ ಶಾರದಾಂಬೆ ಹಾಗೂ ಶಂಕರಾಚಾರ್ಯರ ಮೂರ್ತಿಗಳಿಗೆ ಪಂಚಾಮೃತ ಅಭಿಷೇಕ ರುದ್ರಾಭಿಷೇಕ ಅಷ್ಟೋತ್ತರ ಶತನಾಮಾವಳಿ ನಡೆಸಲಾಯಿತು ಜೊತೆಗೆ ಸಂಜೆಯ ಕಾರ್ಯಕ್ರಮದಲ್ಲಿ ಶಾರದಾ ಶಂಕರ ಭಕ್ತ ಮಂಡಳಿ ಸೌಂದರ್ಯ ಲಹರಿ ಭಗಿನಿಯರ ಸಂಘ ಇತರೆ ಭಜನಾ ಮಂಡಳಿಯವರಿಂದ ಕುಂಕುಮಾರ್ಚನೆ ಲಲಿತ ಸಹಸ್ರನಾಮಾವಳಿ ಪಾರಾಯಣ ಇತರೆ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕ ಕುಮಾರ್ ಭಟ್ ನೆರವೇರಿಸಿದರು ಇದೇ ಸಂದರ್ಭದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಿರ್ಮಲ ರಾಯ್ಕರ್ ಸು ಮಂಗಳ ಇವರನ್ನು ವಿವಿಧ ಭಜನಾ ಮಂಡಳಿಯ ಪ್ರಮುಖರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ರಾಘವೇಂದ್ರ ಅಳವಂಡಿ ಶ್ರೀನಿವಾಸ ಕರಮಡಿ ವಿದ್ಯಾ ತೀರ್ಥ ನಾರ್ವೆ ವೇಣು ಬಾಲಕೃಷ್ಣ ದೇಸಾಯಿ ಇತರರು ಪಾಲ್ಗೊಂಡಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago