Breaking News

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ನಡೆದಭಗತಸಿಂಗ್‌ರ ಹುತಾತ್ಮದಿನಾಚರಣೆಭಾರಧ್ವಾಜ್

Held in the office of the Krantichakra Balaga Bhagat Singh’s Martyrdom Day Bhardwaj

ಗಂಗಾವತಿ: ಮಾರ್ಚ್-೨೩ ಶನಿವಾರ ನಗರದ ರಾಯಚೂರು ರಸ್ತೆಯಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಭಗತಸಿಂಗ್, ರಾಜಗುರು, ಸುಖದೇವ್ ರವರ ಹುತಾತ್ಮ ದಿನಾಚರಣೆ ನಡೆಸಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.
ಈ ಹುತಾತ್ಮ ದಿನಾಚರಣೆ ಪ್ರಯುಕ್ತ ಭಗತಸಿಂಗ್, ರಾಜಗುರು, ಸುಖದೇವ್‌ರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮರ ಜೀವನ ಚರಿತ್ರೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು.
ಹಾಗೆಯೇ ವಿದ್ಯಾರ್ಥಿ ಘಟಕದ ನಾಯಕರಾದ ಇಂಕಿಲಾಬ್ ಫಯಾಜ್ ಮಾತನಾಡಿ, ಉರ್ದು ಭಾಷೆಯಲ್ಲಿರುವ ಕ್ರಾಂತಿಕಾರಿ ಕವಿತೆಯನ್ನು ಕನ್ನಡಕ್ಕೆ ಅರ್ಥೈಸಿ ಹೇಳಿದರು.
ಸಿ.ಪಿ.ಐ.ಎಂ.ಎಲ್ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜು ಮಾತನಾಡಿ, ಭಗತಸಿಂಗ್‌ರ ಜೀವನ ಕಾರ್ಮಿಕರಿಗೆ ಮಾರ್ಗದರ್ಶನ ಎಂದರು.
ಈ ಸಂದರ್ಭದಲ್ಲಿ ಕಾರ್ ಮೆಕ್ಯಾನಿಕ್ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.