Breaking News

ಆನೆಗುಂದಿ ಶ್ರೀ ಆಂಜನೇಯದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿಯಲ್ಲಿ9,29,147/- ರೂ ಗಳು ಸಂಗ್ರಹ

9,29,147/- collected in Anegundi Sri Anjaneya Devasthan Anjanadri Betta Hundi

ಗಂಗಾವತಿ, ಸಮೀಪದ ಆನೆಗುಂದಿ (ಚಿಕ್ಕರಾಂಪುರ) ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ದಲ್ಲಿ
ಇಂದು ದಿ. 27/03/2024 ರಂದು ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸಹಾಯಕ ಆಯುಕ್ತರು ಕೊಪ್ಪಳ ಹಾಗೂ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಶ್ರೀ ಮಹಾಂತಗೌಡ ಗೌಡರ ಗ್ರೇಡ್-2 ತಹಶೀಲ್ದಾರರು, ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 21-02-2024 ರಿಂದ 27-03-2024 ರವರೆಗೆ ಒಟ್ಟು 36 ದಿನಗಳ ಅವಧಿಯಲ್ಲಿ) ಒಟ್ಟು ರೂ. 9,29,147/- ರೂ ಗಳು ಸಂಗ್ರಹವಾಗಿರುತ್ತದೆ. 3 ವಿದೇಶಿ ನಾಣ್ಯಗಳು ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ.

ಈ ಸಂದರ್ಭದಲ್ಲಿ ಶಿರಸ್ತೇದಾರಾದ ಅನಂತ್ ಜೋಷಿ ನರ್ಮದಾ
, ಕೃಷ್ಣವೇಣಿ, ಸುಹಾಸ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ , ಹಾಲೇಶ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಗುರುರಾಜ ಅನ್ನಪೂರ್ಣ ಪ್ರದಸ, ಕವಿತಾ‌ ಕೆ, ಸುಧಾ, ಕವಿತಾ ದ್ವಿ.ದ.ಸ, ಮಂಜುನಾಥ ದಮ್ಮಾಡಿ ಅಸ್ಲಾಂ ಪಟೇಲ್, ಗ್ರಾಮ ಆಡಳಿತ ಅಧಿಕಾರಿ,ಮತ್ತು ಗಂಗಾವತಿ,,ಮರಳಿ ಗ್ರಾಮ ಆಡಳಿತ ಅಧಿಕಾರಿಗಳು , ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಸುನಿಲ್ , ರಾಜಶೇಖರ್, ಪೋಲಿಸ್ ಸಿಬ್ಬಂದಿ , ಮತ್ತು ಪ್ರವಾಸಿ ಮಿತ್ರ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .21/02/2024 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ ರೂ.34,86,965./- ಸಂಗ್ರಹವಾಗಿತ್ತು.

About Mallikarjun

Check Also

ಹನೂರು ವಿದಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರ ಮತಗಟ್ಟೆ ಧ್ವಂಸ

ವರದಿ : ಬಂಗಾರಪ್ಪ ಸಿ .ಹನೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.