ಮೊದಲಭಾರಿಗೆಮಂಗಳವಾರ ನಡೆಯಲಿರುವ ಪಟ್ಟಣದ ಅಧಿದೇವತೆ ಬೆಟ್ಟಳ್ಳಿ ಮಾರಮ್ಮನ ರಥೋತ್ಸವ,ಸಮಿತಿಯಿಂದ ಭಕ್ತರಿಗೆ ಮನವಿ

Rathotsava of the town’s deity Bettalli Maramma to be held on Tuesday for the first month, the committee appeals to the devotees.


ವರದಿ;ಬಂಗಾರಪ್ಪ ಸಿ .
ಹನೂರು : ಪಟ್ಟಣದ ಅಧಿದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ ಇದರ ಸಂಪೂರ್ಣ ಕಾರ್ಯವನ್ನು ಬೆಟ್ಟಳ್ಳಿ ಮಾರಮ್ಮ ಸಮಿತಿಯ ಅಧ್ಯಕ್ಷರಾದಿಯಾಗಿ ಸಖಲ ಭಕ್ತರು ಕಾಣಿಕೆ ನೀಡುವುದರ ಮೂಲಕ ಇದೇ ತಿಂಗಳು 2/3/2024 ರ ಮಂಗಳವಾರ ದಂದು ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ .
ಶಿಲ್ಪ ಕಲೆಯ ನಿಪುಣ, ರಥ ತಯಾರಿಸುವ ಕಾಯಕದಲ್ಲಿ ನಿರತರಾದ ಮೈಸೂರು ಜಿಲ್ಲೆಯ ರಥಶಿಲ್ಪಿ ಜಿ ವೆಂಕಟೇಶ್ ಮೂರ್ತಿ‌ ಹಾಗೂ ಹತ್ತಾರು ಸಹ ಕಾಷ್ಠಶಿಲ್ಪ ಕಲಾವಿದರ ಕೈಯಲ್ಲಿ ಅರಳಿರುವ ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ರಥ ನಿರ್ಮಾಣ ಕಾರ್ಯ ಮುಕ್ತಾಯ ಹಂತ ತಲುಪಿ ಅಂತಿಮ ಸ್ಪರ್ಶ ನೀಡುವ ಕೆಲಸ ಭರದಿಂದ ಸಾಗಿದೆ.ಇದರೊಂದಿಗೆ ಹಲವಾರು ತಲೆಮಾರುಗಳಿಂದ ಇದ್ದ ತೇರು ನಿರ್ಮಾಣದ ಕನಸು ಈಗ ನನಸಾಗುತ್ತಿದೆ.
14.5ಅಡಿಯ‌ ನೂತನ ರಥ ನೋಡುಗರ ಕಣ್ಮನ ಸೆಳೆಯುವಂತ ಶೈಲಿ: ರಥ ಶಿಲ್ಪಿಗಳಿಂದ ವಿನೂತನ ಮಾದರಿಯ ಸುಂದರವಾದ 4ಚಕ್ರಗಳುಳ್ಳ ರಥವು ತಳಭಾಗದ ಅಚ್ಚುಗಡ್ಡಿ, ಕುದುರೆ,ಸಿಂಹ ಲಾಂಛನ ಸೇರಿ ಎಂಟು ಅಷ್ಟಕಂಬಗಳುಳ್ಳ 14.5ಅಡಿಯ‌ ಶ್ರೀ ಬೆಟ್ಟಳ್ಳಿ ಮಾರಮ್ಮನ ಪುಷ್ಪಕ ರಥವು ನೋಡುಗರ ಕಣ್ಮನ ಸೆಳೆಯುವಂತ ಶೈಲಿಯಲ್ಲಿ ಕೆತ್ತಲ್ಪಟ್ಟಿದೆ

ಈ ಸುಂದರ ಬದಲಾವಣೆಗೆ ಕಾಯುತ್ತಿದ್ದಾರೆ ಭಕ್ತರು :ದೇವಾಲಯವು ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಈ ಸುಂದರ ಬದಲಾವಣೆಗೆ ಕ್ಷೇತ್ರದ ಭಕ್ತರು ಕಾಯುತ್ತಿದ್ದಾರೆ. ಹೌದು, ಚಾಮರಾಜನಗರ ಜಿಲ್ಲೆಯ‌ ನೂತನ ತಾಲ್ಲೂಕು ಕೇಂದ್ರವಾದ ಹನೂರು ಪಟ್ಟಣದಲ್ಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯ ದಿನ ಕಳೆದಂತೆ ಪ್ರಖ್ಯಾತ ಹೊಂದುತ್ತಿದ್ದು ನೆರೆಯರಾಜ್ಯ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಕೂಡ ಭಕ್ತ ಸಮೂಹ ದೇವಾಯಲಯಕ್ಕೆ ಆಗಮಿಸುತ್ತಾರೆ ಇನ್ನೂ ವರ್ಷಕ್ಕೆ ಒಂದು ಭಾರಿ ನೆಡೆಯುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಟ್ಟು ತಮ್ಮ ಇಷ್ಟಾರ್ಥಗಳು ನೆರವೇರುವಂತೆ ಕೋರಿ ಪ್ರಾರ್ಥನೆ ಸಲ್ಲಿಸುತ್ತಾರೆ ಅಲ್ಲದೆ ವಿಶೇಷ ಪೂಜಾ ಪುನಸ್ಕಾರದಲ್ಲಿ ಭಾಗಿಯಾಗುತ್ತಾ ಬಂದಿದ್ದಾರೆ. ಅಲ್ಲದೆ ಪ್ರತಿ ಮಂಗಳವಾರ ಮದ್ಯಾಹ್ನ ಆಗಮಿಸುವ ಸಮಸ್ತ ಭಕ್ತರಿಗೆ ಹಲವು ವರ್ಷಗಳಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಈ ಭಾರಿ ಜಾತ್ರಾ ಮಹೋತ್ಸವ ಏಪ್ರೀಲ್ 1ರಂದು ರಾತ್ರಿ ಜಾಗರ ಸಮರ್ಪಣೆ, ಏಪ್ರೀಲ್ 2ರಮಂಗಳವಾರ ಮದ್ಯಾಹ್ನ12ಘಂಟೆಗೆ ರಥೋತ್ಸವ ಹಾಗಯೇ ಅದೇ ದಿನ ತಂಪುಜ್ಯೋತಿ ಏಪ್ರೀಲ್ 3 ರ ಬುಧವಾರದಂದು ಹರಕೆ ಹೂತ್ತಭಕ್ತರಿಂದ ಭಾಯಿಬೀಗ ಸೇರಿದಂತೆ ಏಪ್ರೀಲ್4ರಗುರುವಾರ ಮುಂಜಾನೆ ಆಗ್ನಿ‌ಕುಂಡ ಪ್ರದರ್ಶನ ಜರುಗಲಿದೆ ಹೀಗೆ ನಾಲ್ಕು ದಿನಗಳ ಕಾಲ ಜಾತ್ರೆ ನೆಡೆಯುತ್ತಿದ್ದು ಜಾತ್ರಾ ಮಹೋತ್ಸವದ ಎರಡನೇ ದಿನ ನೂತನ ರಥೋತ್ಸವ ನಡೆಯಲಿದೆ.
ಇತಿಹಾಸದಲ್ಲಿ ಮೊದಲ ಭಾರಿಗೆ ನೆಡೆಯುವ ರಥೋತ್ಸವಕ್ಕೆ ಸಾವಿರಾರು ಮಂದಿ ಭಕ್ತರು
ಬಂದು ಭಾಗಿಯಾಗುವ ನಿರೀಕ್ಷೆ ಇದ್ದು ಭಕ್ತರಿಗೆ ಈ ಬಾರಿ ಒಂದು ಹೊಸ ಅನುಭವ ದೊರಕಲಿದೆ.

ಶ್ರೀಬೆಟ್ಟಳ್ಳಿ ಮಾರಮ್ಮ ದೇವಿಯ ಸಾನ್ನಿಧ್ಯದಲ್ಲಿ ನೂತನ ರಥೋತ್ಸವ ದೇವಿಯ ಆರ್ಶೀವಾದದೊಂದಿಗೆ ಪ್ರಥಮ ಭಾರಿಗೆ ನೆಡೆಸಲು ನಿರ್ಧಾರವಾಗಿದ್ದು ದೇವಿಯ ಅನುಗ್ರಹದಿಂದ ಭಕ್ತರ ಬೇಡಿಕೆಗಳು ಹಾಗೂ ಇಷ್ಟಾರ್ಥಗಳು ನೇರವೇರಲಿ ಸರ್ವರಿಗೂ ಒಳಿತಾಗಲಿ
ರಾಜೂಜೀರಾವ್ ಪ್ರಧಾನ ಆರ್ಚಕರು.ಮಕ್ಕಳಾದ ಜಯಂತ್ ರಾವ್ ಮತ್ತು ಅರುಣ್ ಕುಮಾರ್ ,ಅರ್ಚಕರುಗಳು ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯ ಹನೂರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago