Breaking News

ಅಶೋಕಸ್ವಾಮಿ ಹೇರೂರ ಭೇಟಿಯಾದ ಬಾಜಪ ಅಭ್ಯರ್ಥಿ ಡಾ.ಬಸವರಾಜ.

Ashokaswamy Heroor met BJP candidate Dr. Basavaraja.

ಗಂಗಾವತಿ:ಭಾರತೀಯ ಜನತಾ ಪಕ್ಷದ ಕೊಪ್ಪಳ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಡಾ.ಬಸವರಾಜ.ಕೆ ಅವರು ಕೊಪ್ಪಳ ಜಿಲ್ಲಾ ವಾಣಿಜ್ಯೊದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಮತ್ತು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು ಭೇಟಿಯಾಗಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪ್ರಭಾವ ಬಳಸಿ, ಬಿ.ಜೆ.ಪಿ ಅಭ್ಯರ್ಥಿಗೆ ಮತಗಳನ್ನು ದೊರಕಿಸಿಕೊಡಲು ಸಹಾಯ ಮಾಡಬೇಕೆಂದು ಬಿ.ಜೆ.ಪಿ.ಧುರಿಣ ಎಚ್.ಗಿರೆಗೌಡ ಅವರು ಅಶೋಕಸ್ವಾಮಿ ಅವರಲ್ಲಿ ಮನವಿ ಮಾಡಿದ್ದರು.

ಮಾಜಿ ಶಾಸಕ ಪರಣ್ಣ ಮುನವಳ್ಳಿಯವರು ಮಾತನಾಡಿ ಬಿ.ಜೆ.ಪಿ.ಬೆಂಬಲಿಸಲು ವಿನಂತಿಸಿದರು.ಈ ಸಂಧರ್ಭದಲ್ಲಿ ರಾಜಶೇಖರಯ್ಯ ಭಾನಾಪೂರ, ನಾಗರಾಜಸ್ವಾಮಿ,ದರೋಜಿ ರಘುನಾಥ, ಸುರೇಂದ್ರ ಮತ್ತು ರಮೇಶ್ ಮಡಿವಾಳರ ಸೇರಿದಂತೆ ಬಿ.ಜೆ.ಪಿಯ ಇತರ ಧುರಿಣರು ಹಾಜರಿದ್ದರು.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.