ಗಂಗಾವತಿ: ಶ್ರೀಚನ್ನಬಸವಸ್ವಾಮಿ ಪಟ್ಟಣ ಸೌಹಾರ್ದ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ೧.೬೩ ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಗಿರಿಯಪ್ಪ ಹೊಸಕೇರಿ ಹಾಗೂ ಸಿ.ಇ.ಓ. ನಾಗೇಶ್ ಗೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ರೂ. ೨.೨೯ ಕೋಟಿ ಗಳÀ ಒಟ್ಟು ಲಾಭವನ್ನು ಗಳಿಸಿದೆ. ಇದರಲ್ಲಿ ಆದಾಯ ತೆರಿಗೆ ಮತ್ತು ಎನ್.ಪಿ.ಏ. ಪ್ರಾವಿಜನ್ ರೂ. ೦.೬೬ ಕೋಟಿ ಮೊತ್ತವನ್ನು ತೆಗೆದಿರಿಸಿ, ನಿವ್ವಳ ರೂ. ೧.೬೩ ಕೋಟಿ ಲಾಭವನ್ನು ಗಳಿಸಿದೆ. ಇದು ಹಿಂದಿನ ಸಾಲಿನಲ್ಲಿ ಗಳಿಸಿದ ನಿವ್ವಳ ಲಾಭ ಮೊತ್ತ ರೂ.೧.೨೨ ಹೋಲಿಸಿದಲ್ಲಿ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ ಲಾಭ ಗಳಿಕೆಯಲ್ಲಿ ಶೇ. ೩೨.೮ ರ ಗಮನಾರ್ಹ ಪ್ರಗತಿಯನ್ನು ದಾಖಲಿಸಿದೆ. ಪ್ರಸಕ್ತ ಸಾಲಿನ ಅಂತ್ಯಕ್ಕೆ ಬ್ಯಾಂಕು ರೂ. ೭೨.೫೮ ಕೋಟಿ ಠೇವಣಿಗಳು, ರೂ.೪೯.೫೭ ಕೋಟಿ ಸಾಲ ಮತ್ತು ಮುಂಗಡಗಳು, ರೂ.೩೧.೭೨ ಕೋಟಿಗಳ ಹೂಡಿಕೆಯನ್ನು ಮತ್ತು ರೂ.೯೧.೭೭ ಕೋಟಿ ದುಡಿಯುವ ಬಂಡವಾಳವನ್ನು ದಾಖಲಿಸಿದೆ ಹಾಗೂ ಪ್ರಸಕ್ತ ಸಾಲಿಗೆ ಹಾಕಿಕೊಂಡ ಗುರಿಯನ್ನು ತಲುಪಿದೆ. ಬ್ಯಾಂಕಿನ ಪ್ರಥಮ ಶಾಖೆಯನ್ನು ಕಾರಟಗಿ ಪಟ್ಟಣದಲ್ಲಿ ಪ್ರಾರಂಭಿಸಲು ಆಡಳಿತ ಮಂಡಳಿಯು ಹಾಕಿಕೊಂಡ ಯೋಜನೆಯನ್ನು ಯಶಸ್ವಿಗೊಳಿಸಲಾಗಿದೆ. ಈ ಸಾಧನೆಗೆ ಸಹಕಾರ ನೀಡಿದ ಗ್ರಾಹಕರು ಹಾಗೂ ಠೇವಣಿದಾರರನ್ನು ಹೊಸಕೇರಿ ಸ್ಮರಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…