Breaking News

ಶಾಲೆ, ಆರೋಗ್ಯಕೇಂದ್ರ, ಮಕ್ಕಳ ಮನೆಗಳಿಗೆ ಜಿ.ಪಂ. ಸಿಇಓ ಭೇಟಿ

Screenshot 2024 04 03 17 27 19 51 6012fa4d4ddec268fc5c7112cbb265e7 1024x621

ಸಂಗಾಪುರ ಗ್ರಾಮಕ್ಕೆ ಜಿ.ಪಂ. ಸಿಇಓ ಭೇಟಿ ಮಕ್ಕಳ ಆರೋಗ್ಯ ವಿಚಾರಣೆ

Screenshot 2024 04 03 17 27 43 85 6012fa4d4ddec268fc5c7112cbb265e7 300x216

ಗಂಗಾವತಿ : ತಾಲೂಕಿನ ಸಂಗಾಪುರ ಗ್ರಾ.ಪಂ. ವ್ಯಾಪ್ತಿಯ ಸಂಗಾಪುರದಲ್ಲಿ ಬಿಸಿಯೂಟದಿಂದ ಅಸ್ವಸ್ಥಗೊಂಡಿದ್ದ ಮಕ್ಕಳ ಮನೆಗಳಿಗೆ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರ ಖುದ್ದಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಜಾಹೀರಾತು

ನಂತರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳು ಚೇತರಿಕೆಗೊಂಡ ವರದಿಯ ಮಾಹಿತಿ ವೈದ್ಯರಿಂದ ಪಡೆದರು.

ನಂತರ ಗ್ರಾಮದ ಶಾಲೆಗೆ ಜಿ.ಪಂ. ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ‘ಶಾಲೆಯಲ್ಲಿರುವ ಕುಡಿವ ನೀರು, ಬಳಕೆ ನೀರು ಹಾಗೂ ಬಿಸಿಯೂಟ ಕೊಠಡಿ ಸೇರಿ ಇತರೆ ಸೌಲಭ್ಯಗಳ ಪರಿಶೀಲಿಸಿದರು. ಶಾಲಾ ಅನುದಾನ ಬಳಕೆ ಮಾಡಿಕೊಂಡು ಮಕ್ಕಳಿಗೆ ಸುಸಜ್ಜಿತ ಸೌಲಭ್ಯ ಕಲ್ಪಿಸಬೇಕು. ಅಡುಗೆಕೊಣೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು‌. ಇಂಥ ಪ್ರಕರಣಗಳು ಮತ್ತೆ ಕಂಡು ಬಂದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಶಾಲೆಯ ಮುಖ್ಯಶಿಕ್ಷಕರಿಗೆ’ ನೀಡಿದರು.

ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಆರ್ ಡಬ್ಲ್ಯುಎಸ್ ಎಇಇ ವಿಜಯ ಕುಮಾರ್, ತಾ.ಪಂ. ಸಹಾಯಕ‌ ನಿರ್ದೇಶಕರಾದ ಮಹಾಂತಗೌಡ ಪಾಟೀಲ್,
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.