Breaking News

ಸಸಿ ನೆಟ್ಟು ನೀರುಣಿಸುವ ಮೂಲಕ ದಾಪಂತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು

ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ನವ ದಂಪತಿಗಳು ಸಸಿ ನೆಟ್ಟು ನೀರುಣಿಸುವ ಮೂಲಕ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿ ಆಚರಿಸಿಕೊಂಡರು.

ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯರಿಗೆ,ಅತಿಥಿಗಳಿಗೆ, ಗಣ್ಯವ್ಯಕ್ತಿಗಳಿಗೆ,ಸಂಭಂದಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.ಮದುವೆ ಸಮಾರಂಭದಲ್ಲಿ501ಸಸಿಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಎಲ್ಲ ಸಾರ್ವಜನಿಕರು,ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ.ಮ.ಘ. ಚ.ಮಹಾಂತಲಿಂಗ ಶಿವಾಚಾರ್ಯ ಕರೆಗುಡ್ಡ ಹಾಗೂ ಅಬ್ಬಾಸಲಿ ತಾತನವರು,ವನಸಿರಿ ಫೌಂಡೇಶನ್ ಸದಸ್ಯರು, ಕುಟುಂಬದ ಸದಸ್ಯರು,ಪರಿಸರ ಪ್ರೇಮಿಗಳು,ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಊರಿನ ಯುವಕರು,ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.