Breaking News

ಸುಮಲತಾಅಂಬರೀಶ್ ಬಿಜೆಪಿಸೇರಲಿದ್ದಾರೆ

Screenshot 2024 04 05 11 30 13 85 40deb401b9ffe8e1df2f1cc5ba480b12 300x191

ಬೆಂಗಳೂರು,: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ರ‍್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ರ‍್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ ೫ ಏಪ್ರಿಲ್ ೨೦೨೪ರ ಶುಕ್ರವಾರ ಬೆಳಿಗ್ಗೆ ೧೧.೩೦ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸರ‍್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶರ‍್ವಾದ ಎಂದಿನಂತೆ ಇರಲಿ ಎಂದು ಅವರು ಬರೆದಿದ್ದಾರೆ.

ಜಾಹೀರಾತು

ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.