ಬೆಂಗಳೂರು,: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ ೫ ಏಪ್ರಿಲ್ ೨೦೨೪ರ ಶುಕ್ರವಾರ ಬೆಳಿಗ್ಗೆ ೧೧.೩೦ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶರ್ವಾದ ಎಂದಿನಂತೆ ಇರಲಿ ಎಂದು ಅವರು ಬರೆದಿದ್ದಾರೆ.
ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…