ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣದಲ್ಲಿರುವ ಡಾ”ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ (ಹೊಸಹಳ್ಳಿ)ಯಲ್ಲಿ, ವಿದ್ಯಾಭ್ಯಾಸ ಮಾಡುತ್ತಿರುವ ದಲಿತ ವಿದ್ಯಾರ್ಥಿಗಳಿಗೆ. ಕಳೆದ ಆರು ತಿಂಗಳುಗಳಿಂದ ಕನಿಷ್ಠ ಸೌಲಭ್ಯ(ಕಿಟ್), ನೀಡಿಲ್ಲ ಎಂಬ ಗಂಭೀರ ಆರೋಪವನ್ನು. ದಲಿತ ಯುವ ಹೋರಾಟಗಾರರಾದ ಪಂಪಾಪತಿ ಹಾಗೂ ಸಂತೋಷ ಕುಮಾರವರು, ಹೇಳಿಕೆ ನೀಡುವ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಇಲಾಖೆಯ ನಿರ್ಲಕ್ಷ್ಯ ಧೋರಣೆಯನ್ನು ಅವರು ತೀವ್ರವಾಗಿ ಖಂಡಿಸುತ್ತಿರುವುದಾಗಿ, ಮತ್ತು ಸಂಬಂಧಿಸಿದಂತೆ ಮುಖ್ಯ ಮಂತ್ರಿಗಳ ಗಮನಕ್ಕೆ ಲಿಖಿತ ದೂರಿನ ಮೂಲಕ ತರಲಾಗುವುದೆಂದು ತಿಳಿಸಿದರು. ದಲಿತ ಸಮುದಾಯಗಳ ಮಕ್ಕಳಿರುವ, ವಸತಿ ಶಾಲೆಗೆ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಗಳು. ಕಳೆದ ಆರು ತಿಂಗಳುಗಳಿಂದ ಕನಿಷ್ಠ (ಕಿಟ್)ಸೌಲಭ್ಯಗಳನ್ನು, ನೀಡದಿರುವುದು ಖಂಡನೀಯವಾಗಿದೆ. ಸಂಬಂಧಿಸಿದಂತೆ ಮಾಹಿತಿ ಹಕ್ಕಿನಡಿ ಖಚಿತ ಮಾಹಿತಿ ಪಡೆದು, ಇಲಾಖೆಯ ಜಿಲ್ಲಾಧಿಕಾರಿ ವಿರುದ್ಧ ಮತ್ತು ಉನ್ನತಾಧಿಕಾರಿ ವಿರುದ್ಧ, ಕಾನೂನು ಹೋರಾಟ ಮಾಡುವುದಾಗಿ ಅವರು ತಿಳಿಸಿದರು. ಅವ್ಯವಸ್ಥೆಯ ಆಗರ ಅಂಬೇಡ್ಕರ್-ಹೋರಾಟಗಾರರು-ಡಾ”ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಅವ್ಯವಸ್ಥೆಯ ಆಗರವಾಗಿದೆ ಎಂದು ಹೋರಾಟಗಾರರು ದೂರಿದ್ದಾರೆ. ತಾವು ವಸತಿ ಶಾಲೆಯ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ, ವಸತಿ ಶಾಲೆಗೆ ಎ4ರಂದು ಭೇಟಿ ನೀಡಿ ಪರಿಶೀಲಿಸಿರುವುದಾಗಿ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮಂಚವಿಲ್ಲ ಹಾಗೂ ಡೆಸ್ಕ್ ಇಲ್ಲ ಹಾಗೂ ಊಟ ಮಾಡಲು ಟೇಬಲ್ ಗಳಿಲ್ಲ, ಅಭಾವಗಳ ಆಗರವಾಗಿದೆ ವಸತಿ ಶಾಲೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಡಾ”ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಅಭಾವಗಳ ಆಗರವಾಗಿದೆ ಎಂದು. ದಲಿತ ಯುವ ಹೋರಾಟಗಾರರಾದ, ಸಂತೋಷ ಕುಮಾರ ಹಾಗೂ ಪಂಪಾಪತಿ ವಿವರಿಸಿದರು. ಈ ಸಂದರ್ಭದಲ್ಲಿ ಜಿ.ಸಿದ್ದಪ್ಪ ಸೇರಿದಂತೆ ಇತರರು ಇದ್ದರು. ✍️ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ-9008937428
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…