Breaking News

ಪೊನ್ನಾಚಿ ಗ್ರಾಮ ಪಂಚಾಯತಿಯಲ್ಲಿ ಗೋಶಾಲೆ ಪ್ರಾರಂಭ ಮಾಡುವಂತೆ ತಹಸೀಲ್ದಾರ್ ರವರಿಗೆ ರಂಗಸ್ವಾಮಿ ಮನವಿ


ವರದಿ : ಬಂಗಾರಪ್ಪ ಸಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹನೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ಜಾನುವಾರುಗಳಿಗೆ ಮೆವು ಸಿಗದೆ ತೊಂದರೆ ಪಡುವಂತಾಗಿದೆ ಈ ಕೂಡಲೆ ತಾಲ್ಲೂಕು ಆಡಳಿತ ಮಂಡಳಿಯು ಸಕಾಲಕ್ಕೆ ಮೆವುಗಳನ್ನು ಒದಗಿಸಿ ಎಲ್ಲಾ ಜಾನುವಾರುಗಳನ್ನು ಕಾಪಾಡಬೇಕಾಗಿದೆ ಕಾಂಗ್ರೆಸ್ ಮುಖಂಡರಾದ ಉದ್ಯಮಿ ಪೊನ್ನಾಚಿ ರಂಗಸ್ವಾಮಿತಿಳಿಸಿದರು .
ತಹಶಿಲ್ದಾರರವರಿಗೆ ದೂರವಾಣಿ ಮುಖಾಂತರ ಮಾತನಾಡಿದ ಅವರು
ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳು ಸೇರಿದಂತೆ ಪೊನ್ನಾಚಿ, ಇನ್ನು ಮುಂತಾದ ಗ್ರಾಮಗಳಲ್ಲಿ ಜಾನುವಾರುಗಳು ಕಾಡನ್ನೆ ಹೆಚ್ಚಾಗಿ ಆಶ್ರಯಿಸಿರುವುದರಿಂದ ಅವುಗಳಿಗೆ ಮಳೆಯಿಲ್ಲದೆ ಮೇವು ಸಿಗದ ಕಾರಣ ಪ್ರಾಣಿಗಳು ತುಂಬಾ ಸೊರಗಿವೆ ಅದ್ದರಿಂದ ಮೇಲ್ಕಂಡ ಪಂಚಾಯತಿಗಳಿಗೆ ತಾಲ್ಲೂಕು ಆಡಳಿತವು ಮೇವು ಒದಗಿಸುವ ಕಾರ್ಯವನ್ನು ಗೋ ಶಾಲೆಗಳ ನಿರ್ಮಾಣ ಮಾಡಬೇಕೆಂದು ತಹಸೀಲ್ದಾರ್ ಗುರುಪ್ರಸಾದ್ ರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ತಹಶಿಲ್ದಾರರಾದ ಗುರು ಪ್ರಸಾದ್ ಮಾತನಾಡಿ ನಾವು ನಮ್ಮ ತಾಲ್ಲೂಕಿನಲ್ಲಿ ಈಗಾಗಲೇ ಗೋಶಾಲೆ ಪ್ರಾರಂಬಿಸಿದ್ದು ಇನ್ನು ಹಲವೆಡೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮೇವುಗಳನ್ನು ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಪುಟ್ಟಸ್ವಾಮಿ ಬೆಟ್ಟ .ರವಿಕುಮಾರ್ . ದಾಸಪ್ಪ , ಮುನಿಬಸವೇಗೌಡ .ಮುನಿಮಾರ ,ಚಲ್ಲಚಾರಿ ಒಳಗೊಂಡಂತೆ ಗ್ರಾಮಸ್ಥರು ಹಾಜರಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *