ಕಲ್ಯಾಣಸಿರಿ ವಿಶೇಷ

ಆರೋಗ್ಯ ಸಲಹೆ ನೀಡಲು ಗಂಗಾವತಿ ಆಸ್ಪತ್ರೆ ಆಯ್ಕೆ:ದೇಶದ ಪ್ರಮುಖ 14 ಆಸ್ಪತ್ರೆಗಳಲ್ಲಿ ಸ್ಥಾನ ಪಡೆದ ರಾಜ್ಯದ ಏಕೈಕ ಗಂಗಾವತಿ ಆಸ್ಪತ್ರೆ

Gangavati Hospital selected for health consultation: The only Gangavathi hospital in the state ranked among the top 14 hospitals of the country Gangavathi Hospital selected for health consultation: The only Gangavathi hospital ranked among the top 14 hospitals of the country

ಗಂಗಾವತಿ: 12;ಕೇಂದ್ರ ಸರಕಾರದ ಆರೋಗ್ಯ ಇಲಾಖೆಯ ನಾನಾ ಯೋಜನೆಗಳಿಗೆ ಸಲಹೆ ನೀಡಲು ರಾಜ್ಯದಿಂದ ಗಂಗಾವತಿಯ ಸರಕಾರಿ ಉಪ ವಿಭಾಗ ಆಸ್ಪತ್ರೆಯನ್ನು ಆಯ್ಕೆ ಮಾಡಲಾಗಿದೆ.ಆರೋಗ್ಯ ಇಲಾಖೆ ತಜ್ಞರ ಸಮಿತಿಗೆ ಸಲಹೆ ನೀಡಲು ಕೇಂದ್ರ ಆರೋಗ್ಯ ಇಲಾಖೆಯಿಂದ ಆಹ್ವಾನ ನೀಡಲಾಗಿದೆ, ಈ ರೀತಿ ಸರ್ಕಾರಿ ಆಸ್ಪತ್ರೆಗಳು ಕೇಂದ್ರ ಸರ್ಕಾರದ ಮಾಹಿತಿಗೆ ಆಯ್ಕೆಯಾಗುವುದು ಅಷ್ಟೊಂದು ಸುಲಭದ ವಿಷಯವಲ್ಲ ಇದರಲ್ಲಿ

ಆಸ್ಪತ್ರೆಯ ಸಿಬ್ಬಂದಿಗಳ ಒಗ್ಗಟ್ಟಿನಿಂದ ಇಂತಹ ಒಂದು ಸಾಧನೆ ಮಾಡಲು ಸಾಧ್ಯವಾಗಿದೆ, ಇದು ರಾಜ್ಯದ ಮತ್ತು ಗಂಗಾವತಿಯ ಜನತೆಯ ಹೆಮ್ಮೆಯ ವಿಷಯ.

ಈಗಾಗಲೇ ರಚನೆಯಾಗಿರುವ ಸಮಿತಿಗೆ, ಸೂಕ ಸಲಹೆ ನೀಡುವಂತೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರಕಾರಿ ಉಪ ವಿಭಾಗ ಆಸ್ಪತ್ರೆಗೆ ಕೇಂದ್ರದ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಜಂಟಿ ನಿರ್ದೇಶಕ ರೋಹಿತ್ ಡಿಯೋ ಪತ್ರ ಬರೆದು ಆಹ್ವಾನಿಸಿದ್ದಾರೆ.

ಕೇಂದ್ರದ ಸಮಿತಿಗೆ ಸೂಕ್ತ ಸಲಹೆ ನೀಡುವಂತೆ ನಾನಾ ರಾಜ್ಯಗಳ ವಿವಿಧ ಸರಕಾರಿ ಆಸ್ಪತ್ರೆಗಳಿಗೆ ಆಹ್ವಾನ ನೀಡಲಾಗಿತ್ತು. ಆದಾಗ್ಯೂ ಗಂಗಾವತಿ ಉಪ ವಿಭಾಗ ಆಸ್ಪತ್ರೆಯು, ಕರ್ನಾಟಕದಿಂದ ಆಯ್ಕೆ ಮಾಡಿಕೊಳ್ಳಲಾಗಿರುವ ಏಕೈಕ ಆಸ್ಪತ್ರೆಯಾಗಿ ಗಮನಸೆಳೆದಿದೆ. ಮೊದಲ ಹಂತದಲ್ಲಿ ಇ-ಮೇಲ್ ಮೂಲಕ ಮಾಹಿತಿ, ಅಭಿಪ್ರಾಯಗಳನ್ನು ಹಂಚಿಕೊಳ್ಳುವುದು, ಬಳಿಕ ಏ.12ರಂದು ಬಂಗಾಳದ ಟೈರ್ಗ ಸೆಕ್ಟರ್‌ನಲ್ಲಿರುವ ನೀತಿ ಆಯೋಗದ ಕಚೇರಿಯಲ್ಲಿ ಸಂಜೆ 4ರಿಂದ 6ರವರೆಗೆ ಖುದ್ದು ಆಯಾ ಆಸ್ಪತ್ರೆಯ ನಿರ್ದೇಶಕರು, ವೈದ್ಯಕೀಯ ಅಧೀಕ್ಷಕರು, ಮುಖ್ಯ ವೈದ್ಯಾಧಿಕಾರಿಗಳು ಭಾಗಿಯಾಗಿ ಮಾಹಿತಿ ನೀಡಬಹುದು ಎಂದು ಉಲ್ಲೇಖಿಸಲಾಗಿದೆ.

ದೆಹಲಿ, ಛತ್ತೀಸ್‌ಘಡ, ರಾಯಪುರ, ಉತ್ತರಖಂಡದ ರಿಷಿಕೇಶ ಏಮ್ಸ್ ಆಸ್ಪತ್ರೆಗಳು, ಜಮ್ಮು-ಕಾಶ್ಮೀರ ಬಾರಾಮುಲ್ಲದ ಜಿಲ್ಲಾ ಆಸ್ಪತ್ರೆ

ಗಂಗಾವತಿ ಉಪವಿಭಾಗ ಆಸ್ಪತ್ರೆ. ಈ ಆಸ್ಪತ್ರೆಗಳು ಸಲಹೆ ಮತ್ತು ಮಾಹಿತಿಯನ್ನು ನೀಡಬಹುದಾಗಿದೆ.

 *ಉದ್ದೇಶವೇನು* ..?

ಸಾರ್ವಜನಿಕ ಆರೋಗ್ಯಕ್ಕಾಗಿ ಕೇಂದ್ರ ಸರಕಾರ ಜಾರಿ ಮಾಡುತ್ತಿ ರುವ ಆರೋಗ್ಯ ಇಲಾಖೆಯ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಯೋಜನೆ ವಿನ್ಯಾಸ, ಅಗತ್ಯ ಸೌಲಭ್ಯಗಳ ವಿಸ್ತರಣೆ, ಫಲಾನುಭವಿ ರೋಗಿಗಳಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಲಹೆಗಳನ್ನು ಕೇಂದ್ರ ಆಹ್ವಾನಿಸಿದೆ.

 ಒಟ್ಟು 14 ಪ್ರಮುಖ ಆಸ್ಪತ್ರೆಗಳಿಗೆ ಆಹ್ವಾನ ನೀಡಲಾಗಿದ್ದು, ಇದರಲ್ಲಿ ಗಂಗಾವತಿಯ ಉಪ ವಿಭಾಗ ಆಸತ್ರೆಯೂ ಒಂದಾಗಿದೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಸ್ಪತ್ರೆಯಾಗಿ ಗಂಗಾವತಿ ಉಪ ವಿಭಾಗ ಆಸ್ಪತ್ರೆ ಗಮನ ಸೆಳೆದಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago