ಕಲ್ಯಾಣಸಿರಿ ವಿಶೇಷ

ನಕಲಿ ಬಿಲ್ ಸೃಷ್ಠಿಸಿ ತೆರಿಗೆ ಹಣ ವಂಚನೆ ಪಿಡಿಒಗಳ ವಿರುದ್ಧ ಕ್ರಮಕ್ಕೆ ಆಗ್ರಹ

Demand action against PDOs who cheat tax money by creating fake bills


ಗಂಗಾವತಿ
:ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲೂಕುಗಳ ಕೆಲ ಗ್ರಾ.ಪಂ.ಗಳಲ್ಲಿ ೨೦೧೭-೨೨ ವರೆಗೆ ನರೇಗಾ ಯೋಜನೆಯಡಿ ಸಾಮಾಗ್ರಿ ವೆಚ್ಚದ ಬಿಲ್ ಗಳ ನಕಲಿ ಸೃಷ್ಠಿ ಮಾಡಿ ಲಕ್ಷಾಂತರ ರೂ.ಗಳ ಭ್ರಷ್ಠಾಚಾರ ಮಾಡಿದ್ದು ಮಾಹಿತಿ ಹಕ್ಕಿನಡಿ ಬಹಿರಂಗವಾಗಿದ್ದು ಕೂಡಲೇ ಗ್ರಾಮೀಣಾಭಿವೃದ್ಧಿ ಇಲಾಖೆ ಭ್ರಷ್ಠಾಚಾರವೆಸಗಿರುವ ಪಿಡಿಒ ಗಳನ್ನು ಅಮಾನತುಗೊಳಿಸಿ ಅವರಿಂದ ಹಣ ವಸೂಲಿ ಮಾಡುವಂತೆ ಮಾಹಿತಿ ಹಕ್ಕು ಹೋರಾಟಗಾರ ಹಾಗೂ ಗುತ್ತಿಗೆದಾರ ಚಂದನಗೌಡ ಸರಕಾರವನ್ನು ಒತ್ತಾಯಿಸಿದ್ದಾರೆಂ
೨೦೧೭-೨೨ ನೇ ಸಾಲಿನ ಕಾರಟಗಿ, ಗಂಗಾವತಿ ಮತ್ತು ಕನಕಗಿರಿ ತಾಲೂಕಿನ ಕೆಲವು ಗ್ರಾ. ಪಂ.ಗಳಲ್ಲಿ ನರೇಗಾ ಯೋಜನೆಯ ಕಾಮಗಾರಿಯ ಸಾಮಗ್ರಿ ವೆಚ್ಚದ ಬಿಲ್ಲುಗಳನ್ನು ನಕಲಿ ಸೃಷ್ಟಿ ಮಾಡಿ ಸರಕಾರಕ್ಕೆ ಕಟ್ಟಬೇಕಾದ ತೆರಿಗೆ ಹಣವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಲಪಟಾಯಿಸಿದ್ದಾರೆ. ನನ್ನ ಹೆಸರಿನಲ್ಲಿ ನಕಲಿ ಬಿಲ್ ಮುದ್ರಿಸಿ ಖರ್ಚಿನ ಖಾತೆ ಕಡತಗಳಲ್ಲಿ ದಾಖಲು ಮಾಡಲಾಗಿದ್ದು ನನ್ನ ಟಿನ್ ಮತ್ತು ಜಿಎಸ್ಟಿ ನಂಬರ್ ಹಾಕಿರುವುದರಿಂದ ೬೦ ಲಕ್ಷ ರೂ.ಟಿಡಿಎಸ್ ಕಟಾವು ಮಾಡಲಾಗಿದೆ. ಜತೆಗೆ ವಾಣಿಜ್ಯ ತೆರಿಗೆ ಇಲಾಖೆಯವರು ತೆರಿಗೆ ಬಾಕಿ ಪಾವತಿಸುವಂತೆ ನನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದು ಕುಟುಂಬ ನಿರ್ವಾಹಣೆ ತೊಂದರೆಯಾಗಿದೆ. ಗ್ರಾ.ಪಂ.ಗಳ ಪಿಡಿಒಗಳು ಮಾಡಿದ ಭ್ರಷ್ಠಾಚಾರಕ್ಕೆ ನನ್ನ ಬ್ಯಾಂಕ್ ಖಾತೆ ಸೀಜ್ ಆಗಿದ್ದು ಜಿ.ಪಂ. ಸಿಇಒ ಅವರು ಕೂಡಲೇ ಭ್ರಷ್ಠಾಚಾರವೆಸಗಿದ ಪಿಡಿಒಗಳನ್ನು ಅಮಾನತುಗೊಳಿಸಿ ತಮಗೆ ನ್ಯಾಯ ಒದಗಿಸಬೇಕೆಂದು ಚಂದನಗೌಡ ಮನವಿ ಮಾಡಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago