A victory for the Dalits in the case where the police destroyed the crop that the Dalits had sown in the Thippana lake area when they came to harvest.
ಗಂಗಾವತಿ: ಕಳೆದ ೬-೭ ವರ್ಷಗಳ ಹಿಂದೆ ಕನಕಗಿರಿ ತಾಲೂಕಿನ ತಿಪ್ಪನಾಳ ಕೆರೆಯಲ್ಲಿ ಸಾಗು ಮಾಡುತ್ತಿರುವ ದಲಿತರು ಬಿತ್ತಿದ ಫಸಲನ್ನು ಕಟಾವಿಗೆ ಬಂದಾಗ ಸರ್ಕಾರ ಪೊಲೀಸರ ಮುಖಾಂತರ ಬೆಳೆ ನಾಶ ಮಾಡಿಸಿದ್ದಲ್ಲದೇ ೧೯ ಜನ ದಲಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನದಲ್ಲಿಟ್ಟಿದ್ದನ್ನು ವಿರೋಧಿಸಿ ಹೋರಾಟ ಮಾಡಿದ ಪ್ರಕರಣದಲ್ಲಿ ಕನಕಗಿರಿ ದಲಿತರಿಗೆ ಏಪ್ರಿಲ್-೨೪ ರಂದು ಗಂಗಾವತಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ಹರ್ಷ ವ್ಯಕ್ತಪಡಿಸಿದರು.
ಈ ಹೋರಾಟವನ್ನು ಬೆಂಬಲಿಸಿದ ದಲಿತ, ಪ್ರಗತಿಪರರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಈ ಹೋರಾಟದ ಸಂದರ್ಭದಲ್ಲಿ ಕನಕಗಿರಿಗೆ ಭೇಟಿ ನೀಡಿದ ರೈತ ಸಂಘ, ದಲಿತ ಸಂಘಟನೆಗಳು, ಕಮ್ಯುನಿಸ್ಟ್ ಮುಖಂಡರಿಗೆ ಅಭಿನಂದಿಸುತ್ತಾ, ದಲಿತರಿಗೆ ಆದ ಅನ್ಯಾಯ ಸರಿಪಡಿಸಲು ೨೬ ಕುಟುಂಬಗಳಿಗೆ, ಪ್ರತಿ ಕುಟುಂಬಕ್ಕೆ ೦೩ ಎಕರೆಯಂತೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಿಸಲು ಹೋರಾಟ ಮಾಡುವುದಾಗಿ ತಿಳಿಸಿ, ದಲಿತರಿಗೆ ಭೂಮಿ ಸಿಗುವವರೆಗೂ ಮಾಡುವ ಹೋರಾಟಕ್ಕೆ ರಾಜ್ಯಮಟ್ಟದ ಎಲ್ಲಾ ಪ್ರಗತಿಪರ ಮುಖಂಡರು ಹಾಗೂ ಸಂಘಟನೆಗಳು ಬೆಂಬಲಿಸಲು ಕೋರಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…