ಕಲ್ಯಾಣಸಿರಿ ವಿಶೇಷ

ಮಲೇರಿಯಾ ಬಗ್ಗೆ ಮುಂಜಾಗ್ರತೆ ವಹಿಸಿ ಗುರುರಾಜ್ ಹಿರೇಮಠ ಸಲಹೆ

Gururaj Hiremath advises to take precautions against malaria


ಗಂಗಾವತಿ. :ಏ.25: ಚಳಿ, ಜ್ವರ, ನಡುಕ ಇವುಗಳ ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ಇವುಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ, ತಕ್ಷಣ ರಕ್ಷ ಪರೀಕ್ಷೆ ಮಾಡಿಸಿ ಅದಕ್ಕೆ ಸೂಕ್ತವಾದ ಚಿಕಿತ್ಸೆ ಪಡೆದುಕೊಳ್ಳಬೇಕು. ಮಲೇರಿಯಾದ ಬಗ್ಗೆ ಭಯಪಡಬೇಡಿ ಮುಂಜಾಗ್ರತೆ ವಹಿಸಿ ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗುರುರಾಜ ಹಿರೇಮಠ ಸಲಹೆ ನಿಡಿದರು.ಗಂಗಾವತಿ 28 ನೇ ವಾರ್ಡ ಹಿರೇಜಂತಕಲ್ ಕಿಲ್ಲಾ ಏರಿಯಾ ಶ್ರೀ ಅಂಭಾಬವಾನಿ ದೇವಸ್ಥಾನದಲ್ಲಿ ಗುರುವಾರ ಜರುಗಿದ ವಿಶ್ವ ಮಲೇರಿಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸೋಂಕಿತ ಅನಾಫಿಲೀಸ್ ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ಕಾಯಿಲೆ ಬರುತ್ತದೆ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಮನೆ ಸುತ್ತ ನೀರು ಸಂಗ್ರಹವಾಗದಂತೆ ನೋಡಿಕೊಂಡು ಸ್ವಚ್ಛತೆಯನ್ನು ಕಾಪಾಡುವುದು, ನೀರಿನ ಸಂಗ್ರಹಗಳನ್ನು ಭದ್ರವಾಗಿ ಮುಚ್ಚಿಡುವುದು, ಸೊಳ್ಳೆ ಪರದೆ ಮತ್ತು ಶುದ್ಧವಾದ ನೀರನ್ನು ಕುಡಿಯುವುದು, ಸಮತೋಲಿತ ಆಹಾರವನ್ನು ಸೇವಿಸುವುದು, ಮಳೆಯಲ್ಲಿ ನೆನೆಯದಂತೆ ಲಕ್ಷ್ಯವಹಿಸುವುದು ಸೇರಿದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವದರ ಮೂಲಕ ಮಲೇರಿಯಾ ಕಾಯಿಲೆ ಬರದಂತೆ ತಡೆಯಬಹುದಾಗಿದೆ ಎಂದು ಅನೇಕ ಮುಂಜಾಗ್ರತಾ ಕ್ರಮಗಳನ್ನು ತಿಳಿಸಿದರು.

ನಂತರ ಮಾತನಾಡಿದ ನಗರಸಭೆ ಸದಸ್ಯರಾದ ಹುಲಿಗೆಮ್ಮ ಕಿರಿಕಿರಿ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿಕ್ಕ ಮಕ್ಕಳನ್ನು ಹೊರಗಡೆ ಕಳುಹಿಸಬೇಡಿ ಜೊತೆಗೆ ಪ್ರತಿಯೊಬ್ಬರೂ ನಿಂಬೆರಸ ಹಾಗೂ ನೀರು ಹೆಚ್ಚಾಗಿ ಕುಡಿಯಲು ತಿಳಿಸಲಾಯಿತು. ಜೊತೆಗೆ ಜ್ವರ. ವಾಂತಿ. ಭೇದಿ. ತಲೆನೋವು ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರ ಆಸ್ಪತ್ರೆಗೆ ಹೋಗಿ ಪರೀಕ್ಷಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆಯನ್ನು ನೀಡಿದರು

ಈ ಸಂದರ್ಭದಲ್ಲಿ ಆರೋಗ್ಯ ಕಿರಿಯ ಸಹಾಯಕರಾದ ಕೆ.ಹನುಮೇಶ,ರಮೇಶ,
ಮಲೇರಿಯಾ ಲಿಂಕ್ ವರ್ಕ್ ಹೆಚ್.ಸುರೇಶ,ರಮೇಶ ಸಾಲಮನಿ,ಆರೋಗ್ಯ ಸಂಬಂಧಿಗಳಾದ ಸರಸ್ವತಿ, ಆಶಾ ಕಾರ್ಯಕರ್ತೆ ರಂಗಮ್ಮ,ಮಹಾದೇವಮ್ಮ,ಗೌರಮ್ಮ,ಸೇರಿದಂತೆ ಇತರರು ಇದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago