Cleanliness and voting awareness campaign by Yuva Charan Bala
ಗಂಗಾವತಿ: ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಕಿಷ್ಕಿಂಧ ಯುವ ಚಾರಣ ಬಳಗ ಹಾಗೂ ಲಿವ್ ವಿತ್ ಹ್ಯೂಮನಿಟಿ ಟ್ರಸ್ಟ್ ವತಿಯಿಂದ ಇಂದು ಗಂಗಾವತಿ ತಾಲೂಕಿನ ಸಣಾಪುರ ಐತಿಹಾಸಿಕ ಕೆರೆಯ ದಂಡೆಯ ಸ್ವಚ್ಛತಾ ಅಭಿಯಾನ ನಡೆಸಿ, ನಂತರ ಮತದಾನ ಜಾಗೃತಿ ಮೂಡಿಸಲಾಯಿತು.
ಸ್ವಚ್ಚತಾ ಅಭಿಯಾನದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಆನೆಗೊಂದಿಯ ಸುದರ್ಶನ ವರ್ಮ, ಅರ್ಜುನ್ ಜಿ.ಆರ್, ಪ್ರಕಾಶ ಎಂ., ಪಂಪಾಪತಿ ಮುದಗಲ್, ಸೌಮ್ಯ ಶ್ಯಾವಿ, ಪ್ರಸನ್ನ ಮಿಶ್ರಕೋಟಿ, ಮಂಜುನಾಥ ಶ್ರೇಷ್ಠಿ, ಮಂಜುನಾಥ ಇಂಡಿ, ಹರ್ಷ, ಚನ್ನಪ್ಪ ಬಳ್ಳೊಳ್ಳಿ, ಆಕಾಶ ನಾಗಲೀಕರ್, ಚಿದಾನಂದ ಕೀರ್ತಿ ಇತರರು ಪಾಲ್ಗೊಂಡಿದ್ದರು.
ಸಾಣಾಪುರ ಕೆರೆಯ ದಂಡೆಯಲ್ಲಿ ಕುಡಿದು ಬೀಸಾಡಿದ ಮದ್ಯದ ಬಾಟಲ್ಗಳನ್ನು, ಪ್ಲಾಸ್ಟಿಕ್ ಬಾಟಲ್, ಇತರೆ ಪ್ಲಾಸ್ಟಿಕ್ ತಾಜ್ಯವನ್ನು ಸಂಗ್ರಹಿಸಲಾಯಿತು. ನಮ್ಮ ಭಾಗದ ಅತ್ಯುತ್ತಮ ಪ್ರೇಕ್ಷಣೀಯ ಸ್ಥಳಗಳ ಪರಿಸರವನ್ನು ಕಾಪಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಕೆರೆಯ ದಂಡೆಯ ಮೇಲೆ ಮದ್ಯಪಾನ ಮಾಡಿ ಬಾಟಲ್ಗಳನ್ನು ಒಡೆದು ಹಾಕುವುದರಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು ಅಂತಹವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಕೆರೆಗೆ ಗಾರ್ಡ್ಗಳನ್ನು ನೇಮಿಸಬೇಕು ಹಾಗೂ ಅಲ್ಲಲ್ಲಿ ಡಸ್ಟಬಿನ್ಗಳನ್ನು ಇಡಬೇಕು.
ಪ್ರವಾಸಿಗರಿಗೆ ಸ್ವಚ್ಚತಾ ಅರಿವು ಮೂಡಿಸುವ ಬೋರ್ಡ್ಗಳನ್ನು ಹಾಕಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು. ನಂತರ ಜಿಲ್ಲಾ ಚುನಾವಣಾ ರಾಯಭಾರಿಗಳಾದ ಡಾ|| ಶಿವಕುಮಾರ್ ಮಾಲಿಪಾಟೀಲ ಮತದಾನ ಮಹತ್ವದ ಬಗ್ಗೆ ಮಾಹಿತಿ ನೀಡಿ, ಮತದಾನದ ಪ್ರತಿಜ್ಞಾವಿಧಿ ಭೋದಿಸಿ, ಮೇ-೭ ರ ಚುನಾವಣೆಗೆ ಎಲ್ಲರೂ ಕಡ್ಡಾಯ ಮತದಾನ ಮಾಡಿ ಪ್ರಜಾಪ್ರಭುತ್ವ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…