Breaking News

ಶಿಷ್ಟಾಚಾರಕ್ಕಾದರೂ ಗ್ರಾಪಂ ಸದಸ್ಯರನ್ನು ಹಿಟ್ನಾಳ್ ಭೇಟಿಯಾಗಿಲ್ಲ ,ರಮೇಶ್ಕಾಳೆಅಸಮಾಧಾನ

IMG 20240502 WA0183 199x300

ಗಂಗಾವತಿ.ಮೇ.02: ಕೊಪ್ಪಳ ಲೋಕಸಭಾ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು
ಮತದಾನದ ದಿನ ಹತ್ತಿರವಾಗುತ್ತಿದ್ದರೂ ಕೂಡ ಮುಂಚೂಣಿ ನಾಯಕರ ಓಲೈಕೆಯಲ್ಲಿಯೇ ಸಮಯ ಕಳೆಯುತ್ತಿದ್ದಾರೆಯೇ ಹೊರತು ತಳಮಟ್ಟದ ಮುಖಂಡರಾದ ಗ್ರಾಪಂ ಸದಸ್ಯರನ್ನು ಶಿಷ್ಟಾಚಾರಕ್ಕೂ ಭೇಟಿಯಾಗಿ ಮಾತನಾಡಿಸಿಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ರಮೇಶ್ ಕಾಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಗ್ರಾಮೀಣ ಮಟ್ಟದಲ್ಲಿ ವಾರ್ಡುವಾರು ಜನರ ವಿಶ್ವಾಸ ಗಳಿಸಿ ಗ್ರಾಮ ಪಂಚಾಯತಿ ಸದಸ್ಯರಾದವರು ಪಕ್ಷದ ಸಂಘಟನೆಗಾಗಿ ಸಾಕಷ್ಟು ಶ್ರಮಿಸಿರುತ್ತಾರೆ. ಪಕ್ಷ ಆಯೋಜಿಸುವ ದೊಡ್ಡಮಟ್ಟದ ಕಾರ್ಯಕ್ರಮಗಳ ಯಶಸ್ವಿಗೆ ಗ್ರಾಮ ಪಂಚಾಯತಿ ಸದಸ್ಯರ ಪಾತ್ರ ಮಹತ್ವದ್ದು ಎಂಬುದು ಮುಖಂಡರು ಮರೆಯಬಾರದು. ಪಕ್ಷ ಸಂಘಟನೆ, ಪ್ರಣಾಳಿಕೆಗಳ ಪ್ರಚಾರ, ಜನರಿಗೆ ಯೋಜನೆಗಳನ್ನು ತಲುಪಿಸುವಂತಹ ಜವಾಬ್ದಾರಿಯುತ ಕೆಲಸಗಳನ್ನು ಅಚ್ಚುಕಟ್ಟಾಗಿ, ಯಶಸ್ವಿಯಾಗಿ ಮಾಡುವ ಸದಸ್ಯರು ಜನಮಾನಸದಲ್ಲಿ ನಂಬಿಕೆ ಹುಟ್ಟಿಸಿರುತ್ತಾರೆ. ಅಭ್ಯರ್ಥಿಯ ಗೆಲುವಿಗೆ ಗ್ರಾಮೀಣ ಭಾಗದ ಮತಗಳು ಅತ್ಯಗತ್ಯ ಎಂಬ ಸತ್ಯದ ಅರಿವಿದ್ದೂ ರಾಜಶೇಖರ ಹಿಟ್ನಾಳ್ ಅವರು ಗ್ರಾಪಂ ಸದಸ್ಯರನ್ನು ನಿರ್ಲಕ್ಷಿಸಿದ್ದು ಒಳ್ಳೆಯದಲ್ಲ. ಇನ್ನೂ ಕಾಲ ಮಿಂಚಿಲ್ಲ, ಕೂಡಲೇ ಜಿಲ್ಲೆಯ ಗ್ರಾಮ ಪಂಚಾಯತಿ ಸದಸ್ಯರ ಸಭೆ ಕರೆದು ಚರ್ಚಿಸಬೇಕು. ಗ್ರಾಮೀಣ ಭಾಗದ ಮತಗಳು ವಿಭಜನೆ ಆಗದಂತೆ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ರಮೇಶ ಕಾಳೆ ಒತ್ತಾಯಿಸಿದ್ದಾರೆ.

ಜಾಹೀರಾತು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.