Breaking News

ಮದುವೆ ಮಂಟಪದಲ್ಲಿ ಮತದಾನ ಜಾಗೃತಿ

ಕಡ್ಡಾಯ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದ ವರ ಪ್ರಭುರಾಜ

ಕೊಪ್ಪಳ.ಏ.26 : ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ನಂದಿಬಂಡಿ ಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ವಧುವರರಾದ ಪ್ರಭುರಾಜ ಜಾಗೀರದಾರ ಮತ್ತು ಪವಿತ್ರಾ ಅವರ ಮದುವೆಯಲ್ಲಿ ಮತದಾನ ಜಾಗೃತಿಯನ್ನು ಶುಕ್ರವಾರದಂದು ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಗೊಂಡಬಾಳ ಗ್ರಾಮದ ಕೃಷಿ ಕುಟುಂಬದ ಪ್ರಭುರಾಜ ಜಾಗೀರದಾರ ವೃತ್ತಿಯಲ್ಲಿ ಪತ್ರಕರ್ತರಾಗಿದ್ದು, ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮತ್ತು ಪರಿಸರ ಜಾಗೃತಿ ಮೂಡಿಸುವ ಮೂಲಕ ಜನಜಾಗೃತಿ ಕಾರ್ಯ ಮಾಡಿದ್ದಾರೆ.
ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ಹೆಚ್. ಹನುಮಂತಪ್ಪ ನೇತೃತ್ವದಲ್ಲಿ ವರ ಪ್ರಭುರಾಜ ಕಡ್ಡಾಯ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ಮತ್ತು ಪರಿಸರ ಜಾಗೃತಿ ಮೂಡಿಸುವ ಬ್ಯಾನರ್ ಹಾಕಿ ಅತಿಥಿಗಳ ಗಮನ ಸೆಳೆಯಲಾಯಿತು.
ಸ್ವೀಪ್ ಸದಸ್ಯರಾದ ಬಸವರಾಜ ಬಳಿಗಾರ, ವೀರೇಶ ಬಡಿಗೇರ, ತಾ.ಪಂ. ಐಇಸಿ ಕೋ-ಆರ್ಡಿನೇಟರ್ ದೇವರಾಜ ಪತ್ತಾರ, ಮದುವೆಯಲ್ಲಿ ಈ ಯೋಜನೆ ರೂಪಿಸಿದ ಸಮಾಜ ಸೇವಕ ಮಂಜುನಾಥ ಜಿ. ಗೊಂಡಬಾಳ ಮತ್ತು ಜ್ಯೋತಿ ಎಂ.ಗೊಂಡಬಾಳ, ಶಿಕ್ಷಕರಾದ ಹನುಮಂತಪ್ಪ ಕುರಿ, ಸುರೇಶ ಕಂಬಳಿ, ಬಾಲ ನಾಗಮ್ಮ, ಕುಟುಂಬದವರಾದ ಬಸವರಾಜ ಪಲ್ಲೇದ, ಮಹೇಶ ಕರಿಯಪ್ಪ ಜಾಗೀರದಾರ, ಮಾರ್ಕಂಡೆಪ್ಪ ಜಾಗೀರದಾರ ಇತರರು ಇದ್ದರು.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.