ಕಲ್ಯಾಣಸಿರಿ ವಿಶೇಷ

ಬೈಲಹೊಂಗಲ :ನರೇಗಾ ಕೆಲಸಕ್ಕೆ ಹೆಚ್ಚಿನ ಜನರು ಬರುವಂತೆ ಕರೆ- ವಿಜಯ ಪಾಟೀಲ.

ಗ್ರಾಪಂ ಸುತಗಟ್ಟಿ ಮತ್ತು ದೇಶನೂರ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಿಗೆ ಇಂದು ಸಹಾಯಕ ನಿರ್ದೇಶಕ ವಿಜಯ ಪಾಟೀಲ ಭೇಟಿ ನೀಡಿ. ಹೊಸದಾಗಿ ಸಿಗುವಂತಹ ಕೂಲಿ ಮೊತ್ತ 349/- ಬಗ್ಗೆ ವಿವರಿಸಿದರು ಮತ್ತು ಹಾಜರಾತಿ ಕುರಿತು ವಿವರಿಸಿದರು.
ಹಾಜರಾತಿಯಲ್ಲಿ ಪಾರದರ್ಶಕತೆಯ ತರುವ ಸಲುವಾಗಿ ಈಗಾಗಲೇ ಕಳೆದ ಎರಡು ವರ್ಷಗಳಿಂದ ಚಾಲ್ತಿಯಲ್ಲಿರುವ NMMs ಹಾಜರಾತಿಯ ಪರಿಶೀಲನೆ ಮಾಡಿದರು ಇದರಲ್ಲಿ ಕೆಲಸಕ್ಕೆ ಬರುತ್ತೇನೆ ಎಂದ ಕೂಲಿಕಾರರ ಮಾತ್ರ ಕೆಲಸಕ್ಕೆ ಬಂದು ಹಾಜರಾತಿ ಮೂಲಕ ನಿಗಧಿ ಪಡಿಸಿರುವ ಪ್ರಮಾಣದಲ್ಲಿ ಕೆಲಸವನ್ನು ಮಾಡುವುದು ಕಡ್ಡಾಯವಾಗಿರುತ್ತದೆ. ನರೇಗಾ ಯೋಜನೆಯಡಿ ಪ್ರತಿ ಕುಟುಂಬವು ಕಡ್ಡಾಯವಾಗಿ ಆರ್ಥಿಕ ವರ್ಷದಲ್ಲಿ 100 ದಿವಸ ಪೂರೈಸುವಂತೆ ಕೂಲಿಕಾರರಿಗೆ ಮನವರಿಕೆ ಮಾಡಿದರು ನಿಮ್ಮೂರಲ್ಲೇ ಸಾಕಷ್ಟು ಉದ್ಯೋಗ ಖಾತ್ರಿ ಕೆಲಸಗಳು ಇದ್ದು ಈಗಾಗಲೇ ಕ್ರೀಯಾ ಯೋಜನೆಯಲ್ಲಿರುವಂತಹ ಕೆಲಸಗಳನ್ನು ಪೂರ್ಣಗೊಳಿಸಿ ಯಾವುದೇ ಕಾರಣಕ್ಕೂ ಕೂಲಿಕಾರರು ವಲಸೆ ಎಂದು ಬೇರೆ ಬೇರೆ ನಗರಗಳಿಗೆ ಹೋಗದೆ ತಪ್ಪದೇ ಖಾತ್ರಿ ಕೆಲಸಕ್ಕೆ ಬನ್ನಿ ಎಂದರು
ಕೂಲಿಕಾರರಿಗೆ ಯೋಜನೆಯಡಿಯಲ್ಲಿ ಆರೋಗ್ಯ ಶಿಬಿರಗಳು, ನೆರಳು ಹಾಗೂ ಕುಡಿಯುವ ನೀರಿನ ಸೌಲಭ್ಯ ಮತ್ತು ವಿಮಾ ಸೌಲಭ್ಯಗಳನ್ನು ಮಾಡಿಸಿಕೊಂಡು ಆರೋಗ್ಯಯುತ ಬದುಕನ್ನು ಕೂಲಿಕಾರರು ನಡೆಸುವಂತೆ ಕರೆ ನೀಡಿದರು
ತದನಂತರ ಮೇ-07-2024 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನಮ್ಮೆಲ್ಲ ಕೂಲಿಕಾರರು ಮತದಾನದಿಂದ ವಂಚಿತರಾಗಬಾರದು ಮತದಾನದಲ್ಲಿ ಕೂಲಿಕಾರರು ಪಾಲ್ಗೊಂಡು ಕಡ್ಡಾಯವಾಗಿ ತಪ್ಪದೇ ಮತವನ್ನು ಚಲಾಯಿಸಿ ಈ ಬಾರಿ ಗುರುತೀನ ಚೀಟಿಗಾಗಿ ನರೇಗಾ ಜಾಬಕಾರ್ಡ ತೋರಿಸಿ ಮತದಾನ ಮಾಡಿ ಎಂದು ವಿವರಿಸದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ, ವನಜಾಕ್ಷಿ ಪಾಟೀಲ ತಾಂತ್ರಿಕ ಸಂಯೋಜಕ, ಸುನೀಲ್‌ ಅವರನಾಳ ಐಇಸಿ ಸಂಯೋಜಕ ಎಸ್‌ ವ್ಹಿ ಹಿರೇಮಠ ಬೇರಪೂಟ ಟೇಕ್ನಿಷಿಯನ ಸಿದ್ದಪ್ಪ ಕಂಬಾರ, ಗ್ರಾಪಂ ಸಿಬ್ಬಂದಿಗಳು, ಯಶವಂತ, ಸಂತೋಷ್‌ ಶಶಿಕಲಾ ತಳವಾರ ಇತರರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago