ಗಂಗಾವತಿ.ಮೇ.05: ಪ್ರಜಾತಂತ್ರ ಉಳಿವು, ಸಂವಿಧಾನದ ರಕ್ಷಣೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್ ದಲಿತ ಯುವ ಮುಖಂಡ ರಮೇಶ ಕಾಳೆ ಮನವಿ ಮಾಡಿದರು.
ಕೊಪ್ಪಳ ಲೋಕಸಭಾ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಪ್ರಚಾರ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳುಗಳಲ್ಲಿ ತಾನು ನೀಡಿದ ಭರವಸೆಯನ್ನು ಈಡೇರಿಸಿದೆ. ಸಿದ್ದರಾಮಯ್ಯ ಸರಕಾರದ ಯೋಜನೆಗಳು ಜನರು ನೆಮ್ಮದಿಯಿಂದ ಜೀವನ ನಿರ್ವಹಿಸಲು ನೆರವಾಗಿವೆ. ಕೇಂದ್ರದಲ್ಲು ಕಳೆದ ಎರಡು ಅವಧಿಯಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಡವರಿಗಾಗಿ ಕವಡೆ ಕಾಸೂ ಕೊಟ್ಟಿಲ್ಲ. ಬಂಡವಾಳ ಶಾಹಿಗಳು ಕುಬೇರರಾಗಿದ್ದಾರೆ. ಶ್ರೀಮಂತರ ಪರ ಇರುವ ಬಿಜೆಪಿಯನ್ನು ಕಿತ್ತೊಗೆದು ಬಡವರ ಪರ ಕಳಕಳಿ ಹೊಂದಿರುವ ಕಾಂಗ್ರೆಸ್ ಸರಕಾರವನ್ನು ಕೇಂದ್ರದಲ್ಲಿ ತರಬೇಕಿದೆ. ಬಿಜೆಪಿ ಜಾತಿ ಸಂಘರ್ಷ, ಕೋಮುದ್ವೇಷ ಬಿತ್ತುವ ಮೂಲಕ ದೇಶವನ್ನು ಒಡೆದು ಆಳುತ್ತಿದೆ. ಸಂವಿಧಾನ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದ ಬಿಜೆಪಿ ತನ್ನದೇ ಆದ ಅಜೇಂಡಾವನ್ನು ದೇಶದ ಜನರ ಮೇಲೆ ಹೇರುವ ಪಯತ್ನ ನಡೆಸಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶಕ್ಕೆ ಅಪಾಯ ತಪ್ಪಿದ್ದಲ್ಲ. ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಕಾಂಗ್ರೆಸ್ ಗೆ ಮತ ನೀಡಿ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಣವು ಅಧಿಕಾರದ ಚುಕ್ಕಾಣಿ ಹಿಡಿಯಲು ಸೌಮ್ಯ ಸ್ವಭಾವದ, ಜನಸ್ನೇಹಿ ರಾಜಶೇಖರ ಹಿಟ್ನಾಳ್ ಅವರಿಗೆ ಮತ ನೀಡುವ ಮೂಲಕ ಭರ್ಜರಿ ಅಂತರದಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.