ಕಲ್ಯಾಣಸಿರಿ ವಿಶೇಷ

ಪಂಚಾಯತ್ ಸದಸ್ಯ ಶ್ರೀ ಪ್ರಸಾದ್ ರೈ ಮುತುವರ್ಜಿಯಿಂದ 90 ಮನೆಗಳಿಗೆ ಕುಡಿಯುವ ನೀರು, ಸಾರ್ವಜನಿಕ ರಿಂದ ಮೆಚ್ಚುಗೆ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲ 4ನೇ ವಾರ್ಡಿನ ಕಲ್ಲಗುಡ್ಡೆ ಪರಿಸರದ 90 ಮನೆಗಳಿಗೆ ಒಂದು ತಿಂಗಳುಗಳಿಂದ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆ ಎದುರಿಸುತ್ತಿದ್ದರು. ಈ ಸಮಸ್ಯೆಯನ್ನು ಮನಗಂಡ ಸ್ಥಳೀಯ ಪಂಚಾಯತ್ ಸದಸ್ಯರು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಶ್ರೀ ಪ್ರಸಾದ್ ರೈ ಮೇನಾಲರವರ ಮುತುವರ್ಜಿಯಿಂದ ಹಾಗೂ ಗ್ರಾಮ ಪಂಚಾಯತ್ ಅಜ್ಜಾವರ ಆಡಳಿತ ಮತ್ತು ಸುಳ್ಯ ತಾಲೂಕು ಕಾರ್ಯನಿರ್ವಾಹಕ ಅಭಿಯಾಂತರರು ನೀರು ಸರಬರಾಜು ನೈರ್ಮಲ್ಯ ಇಲಾಖೆಯ ಸಹಾಯದಿಂದ ಕೊಳವೆ ಬಾವಿ ಕೊರೆಸಲಾಯಿತು. ಅತೀ ಹೆಚ್ಚಿನ ಪ್ರಮಾಣದಲ್ಲಿ ನೀರು ಸಿಕ್ಕಿದ್ದು 90ಮನೆಯವರು ಕೂಡ ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮೇನಾಲದ ಯುವ ನಾಯಕ ದಕ್ಷಿಣಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಂಜೀತ್ ರೈ ಮೇನಾಲರವರು ಸೇರಿದ ಎಲ್ಲಾರಿಗೂ ಸಿಹಿ ತಿಂಡಿ ವಿತರಣೆ ಮಾಡಿದರು. ಕಲ್ಲಗುಡ್ಡೆ ನಿವಾಸಿಗಳು ಬೋರ್ ವೆಲ್ ವಾಹನ ಬರುವ ಸಂದರ್ಭದಲ್ಲಿ. ರಾತ್ರಿಯಿಂದ ಬೆಳಿಗ್ಗೆ ವರೆಗೆ ಶ್ರಮದಾನದ ಮೂಲಕ ಸಹಕರಿಸಿದರು. ಈ ಸಂದರ್ಭದಲ್ಲಿ ಕೃಷ್ಣಪ್ಪ ಕೆ,ಮೋಹನ, ಸುಕುಮಾರ್,ನಾರಾಯಣ,ಪ್ರಭಾಕರ,ಜನಾರ್ದನ,ಭಾಸ್ಕರ್,ಕೃಷ್ಣಪ್ಪ ಪಿ.ಸಿ,ಶಿವರಾಮ,ಜಯರಾಮ,ಕರುಣಾಕರ,ಸನತ್,ಶರತ್,ಉದಯಕುಮಾರ್,ಮುಝಮ್ಮಿಲ್ ಬಾಡೇಲು,ಮನೋಜ್,ಶ್ರೀಧರ,ಉದಯ,ಗುರುವಪ್ಪ ಕಾಟಿಪಳ್ಳ, ಸಹಕಾರ ನೀಡಿದರು. ಯತೀಶ್ ಮೇನಾಲ,ಮೇನಾಲ ಶಾಲೆ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ಆಲಿ ಮೇನಾಲ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಧರ್ ಮಣಿಯಾಣಿ ಮೇನಾಲ.ಗ್ರಾಮ ಪಂಚಾಯತ್ ಅಜ್ಜಾವರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ,ಪಂಚಾಯತ್ ಸಿಬ್ಬಂದಿ ಲೋಕೇಶ್ ಪಲ್ಲತ್ತಡ್ಕ, ಇಬ್ರಾಹಿಂ ಬೇಲ್ಯ, ಚಂದ್ರಶೇಖರ ಕೆ.ಪಲ್ಲತ್ತಡ್ಕ ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

6 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

12 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago