Breaking News

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!


12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ:

ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಯವರು ಕಾನೂನು ಬಾಹಿರವಾಗಿ ಒಂದೇ ದಿನದಲ್ಲಿ ಸುಮಾರು 30-40 ಖಾತೆಗಳನ್ನು ಮಾಡಿ, ಜಂಟಿ ಬಾಧ್ಯತ (ಜೆ.ಎಲ್.ಜಿ) ಅಡಿಯಲ್ಲಿ ಸುಮಾರು 200-215 ಗುಂಪುಗಳಿಗೆ ಸಾಲವನ್ನು ನೀಡಿ, ಕೋವಿಡ್ ಸಮಯದಲ್ಲಿ ಗ್ರಾಹಕರಿಗೆ 3 ವರ್ಷದವರೆಗೆ ಸುಮ್ಮನಿದ್ದು, ಈಗ ಏಕಾ ಏಕಿ ನೋಟಿಸ್ ನೀಡಿ ಮಾನಸಿಕ ಕಿರುಕುಳ ನೀಡುತ್ತಿದ್ದು, ಸದರಿ ಬ್ಯಾಂಕಿನಲ್ಲಿ ಕೇವಲ 5೦೦೦ ಮಾತ್ರ ನೀಡಿ ಈಗ ಅದಕ್ಕೆ 5೦,೦೦೦/- 1,5೦,೦೦೦/- 2,೦೦,೦೦೦/- 3,೦೦,೦೦೦/- ರವರೆಗೆ ಹಣ ಕಟ್ಟುವಂತೆ ಕಿರುಕುಳ ನೀಡುತ್ತಿರುವ , ಬ್ಯಾಂಕಿನ ಸಿಬ್ಬಂದಿಯವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಿ 12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ ಇವರು ಡಿ.ವೈ.ಎಸ್.ಪಿ. ಗಂಗಾವತಿ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ನಗರ ಘಟಕ ಅಧ್ಯಕ್ಷ ವಿಜಯಲಕ್ಷ್ಮಿ ಹಿರೇಮಠ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷ ಎ,ಭಾರತಿ, ಪದಾಧಿಕಾರಿಗಳಾದ ಗೌಸೀಯಾ,ಪದ್ಮಾವತಿ, ಅಭುಜಾ,ಮಲ್ಲಿಕಾ,ಕೃಷ್ಣ ಎ, ದೇವೇಂದ್ರಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು

About Mallikarjun

Check Also

ದೇವದುರ್ಗದಲ್ಲಿ 11 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಪುನಃ ಶಾಲೆಗೆ ಸೇರ್ಪಡೆಗೆ ಕ್ರಮ

Action to prevent 11 children from going to work in Devadurga and re-enroll them in …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.