ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಯವರು ಕಾನೂನು ಬಾಹಿರವಾಗಿ ಒಂದೇ ದಿನದಲ್ಲಿ ಸುಮಾರು 30-40 ಖಾತೆಗಳನ್ನು ಮಾಡಿ, ಜಂಟಿ ಬಾಧ್ಯತ (ಜೆ.ಎಲ್.ಜಿ) ಅಡಿಯಲ್ಲಿ ಸುಮಾರು 200-215 ಗುಂಪುಗಳಿಗೆ ಸಾಲವನ್ನು ನೀಡಿ, ಕೋವಿಡ್ ಸಮಯದಲ್ಲಿ ಗ್ರಾಹಕರಿಗೆ 3 ವರ್ಷದವರೆಗೆ ಸುಮ್ಮನಿದ್ದು, ಈಗ ಏಕಾ ಏಕಿ ನೋಟಿಸ್ ನೀಡಿ ಮಾನಸಿಕ ಕಿರುಕುಳ ನೀಡುತ್ತಿದ್ದು, ಸದರಿ ಬ್ಯಾಂಕಿನಲ್ಲಿ ಕೇವಲ 5೦೦೦ ಮಾತ್ರ ನೀಡಿ ಈಗ ಅದಕ್ಕೆ 5೦,೦೦೦/- 1,5೦,೦೦೦/- 2,೦೦,೦೦೦/- 3,೦೦,೦೦೦/- ರವರೆಗೆ ಹಣ ಕಟ್ಟುವಂತೆ ಕಿರುಕುಳ ನೀಡುತ್ತಿರುವ , ಬ್ಯಾಂಕಿನ ಸಿಬ್ಬಂದಿಯವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಿ 12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ ಇವರು ಡಿ.ವೈ.ಎಸ್.ಪಿ. ಗಂಗಾವತಿ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ನಗರ ಘಟಕ ಅಧ್ಯಕ್ಷ ವಿಜಯಲಕ್ಷ್ಮಿ ಹಿರೇಮಠ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷ ಎ,ಭಾರತಿ, ಪದಾಧಿಕಾರಿಗಳಾದ ಗೌಸೀಯಾ,ಪದ್ಮಾವತಿ, ಅಭುಜಾ,ಮಲ್ಲಿಕಾ,ಕೃಷ್ಣ ಎ, ದೇವೇಂದ್ರಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…