Breaking News

ತಾಪಮಾನ ಕಡಿಮೆಯಾಗಬೇಕಾದರೆ  ಪ್ರತಿಯೊಬ್ಬರು ಗಿಡ ನೆಡಲೇಬೇಕು..  ಪರಿಸರ ಪ್ರೇಮಿ ಗುಡ್ಲಾನೂರ

1716724994599 300x169

ಪರಿಸರಪ್ರೇಮಿಗಳಿಂದ  ಬೆಟ್ಟಗಳಲ್ಲಿ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮ

ಗಂಗಾವತಿ:  ಪರಿಸರ ಅಸಮತೋಲನದಿಂದ ಜೀವರಾಶಿಗಳಿಗೆ ಕಂಟಕ ಒದಗಿ ಬಂದಿದೆ  ಈ ವರ್ಷದ ಬೇಸಿಗೆಯಲ್ಲಿನ ತಾಪಮಾನ ನೆನೆಸಿಕೊಂಡರೆ ಮತ್ತು ತಾಪಮಾನದಿಂದ ಮಾನವ ಸಂಕುಲ ಹಾಗೂ ಸರ್ವ ಜೀವ ರಾಶಿಗಳು ಪರದಾಡಿದ್ದನ್ನು ನೋಡಿದರೆ  ಮುಂದಿನ ವರ್ಷದ ತಾಪಮಾನ ನೆನೆಸಿಕೊಂಡರೆ ಭಯವಾಗುತ್ತದೆ.   ತಾಪಮಾನ ಕಡಿಮೆಯಾಗಬೇಕಾದರೆ ಇಂದಿನಿಂದಲೇ ಪ್ರತಿಯೊಬ್ಬರು ಗಿಡ ನೆಡಲೇಬೇಕು ಮತ್ತು ಪೋಷಣೆ ಮಾಡಲೇಬೇಕು   ಎಂದರು..

ಜಾಹೀರಾತು

 ರವಿವಾರದಂದು ಲಿವ್ ವಿಥ್ ಹ್ಯುಮಾನಿಟಿ ಮತ್ತು ಕಿಷ್ಕಿಂಧ ಯುವ ಚಾರಣ ಬಳಗ ಆಯೋಜಿಸಿದ ಸಿದ್ದಿಕೇರಿಯ ವಾಣಿಭದ್ರೇಶ್ವರ ಬೆಟ್ಟದಲ್ಲಿ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ವೇಳೆ ಪ್ರಾಸ್ತಾವಿಕವಾಗಿ ಮಾತನಾಡಿದ ಅರ್ಜುನ್ ನೂರಾರು ಊರು ಸುತ್ತಿ ಬಂದ ಮೇಲೇ ನಮ್ಮೂರೆ ನಮಗೆ ಮೇಲು ಅನ್ನುವ ಹಾಗೆ ನಮ್ಮ ಗಂಗಾವತಿಯ ಸುತ್ತಲಿನ  ಪ್ರವಾಸಿತಾಣಗಳು ಅದ್ಭುತವಾಗಿವೆ. ಬೆಟ್ಟಗಳು ಹಸುರಿನಿಂದ ಕಂಗೊಳಿಸಲು ಕಿಷ್ಕಿಂಧ ಯುವ ಚಾರಣಬಳಗ ಹಾಗೂ ಲಿವ್ ವಿತ್ ಹ್ಯೂಮಾನಿಟಿ ಸಂಸ್ಥೆಯ ಸದಸ್ಯರು ಸದಾ ಸಿದ್ದರಿದ್ದು   ಒಂದು ಎಕರೆಯಷ್ಟು  ಮಾದರಿ ದಟ್ಟ ಕಾಡು  ಬೆಳೆಸುವ ಉದ್ದೇಶವಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಕರೆ ನೀಡಿದರು.

ಈ ವೇಳೆ ಸದಸ್ಯರ ಹಾಗೂ  ಪದಾಧಿಕಾರಿಗಳಾದ ಹರನಾಯಕ ,ಪಂಪಾಪತಿ, .,ಸಂತೋಷ್,, ಆಕಾಶ್ ನಾಗಲೀಕರ್, ಮಂಜುಳಾ, ಮಂಜುನಾಥ ಇಂಡಿ, ನಿರುಪಾದಿ ಭೋವಿ, ಬಾಲಪ್ಪ ತಾಳಕೇರಿ, ದೇವರಾಜ್ ಇತರರು ಇದ್ದರು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.