ಕಲ್ಯಾಣಸಿರಿ ವಿಶೇಷ

ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸುನಿಧಿ ರಂಗ ಪ್ರವೇಶ

ಬೆಂಗಳೂರು, ಮೇ, 28; ಹಾವೀರ ಲಲಿತಾಕಲಾ ಅಕಾಡೆಮಿಯ ಗುರು ವಿದುಷಿ ತನುಜಾ ಜೈನ್‌ ಅವರು ತಮ್ಮ ಶಿಷ್ಯೆ 15ರ ಹರೆಯದ ಕುಮಾರಿ ಸುನಿಧಿ ಮಂಜುನಾಥ್‌ ರಂಗ ಪ್ರವೇಶ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಮಹಾವೀರ ಲಲಿತಕಲಾ ಅಕಾಡೆಮಿ ಹಾಗೂ ಸುಮೇರು ಟ್ರಸ್ಟ್ ನ ಸಹಯೋಗದಲ್ಲಿ ನಡೆಯಿತು. ಕುಮಾರಿ ಸುನಿಧಿ 8ನೇ ವಯಸ್ಸಿಗೆ ಗುರುಗಳಲ್ಲಿ ನೃತ್ಯಾಭ್ಯಾಸ ಆರಂಭಿಸಿದರು. ಗುರುಗಳಾದ ವಿದುಷಿ ತನುಜಾರವರು ಆಗಸ್ಟ ಸೆಪೆಂಬರ್‌ ಹೊತ್ತಿಗೆ ರಂಗ ಪ್ರವೇಶ ಮಾಡುವ ಉದ್ದೇಶ ಹೊಂದಿದ್ದರು. ಕುಮಾರಿ ಸುನಿಧಿ ತನ್ನ ಪಿಯುಸಿಯನ್ನು ಕಾರ್ಕಳದಲ್ಲಿ ಮುಂದುವರೆಸುವ ಉದ್ದೇಶವಿರುವುದರಿಂದ ಮುಂಚೆಯೇ ರಂಗ ಪ್ರವೇಶ ಹಮ್ಮಿಕೊಳ್ಳಲಾಗಿತ್ತು.

ರಂಗ ಪ್ರವೇಶಕ್ಕೆ ಸುನಿಧಿಯ ತಯಾರಿ ಪರಿಶ್ರಮ ಶ್ರದ್ಧೆಯನ್ನು ಅವಳ ಗುರುಗಳು ಮುಕ್ತ ಕಂಠದಿಂದ ಹೊಗಳಿದರು. 2 ತಿಂಗಳಕಾಲದಲ್ಲಿ ಸುಮಾರು 5-6 ತಾಸುಗಳ ಸತತ ಅಭ್ಯಾಸದಿಂದ ಅದ್ಭುತವಾದ ನೃತ್ಯ ಪ್ರದರ್ಶನವನ್ನು ಸುನಿಧಿಯು ಮಾಡಿದಳು.

ಡಾ. ರೂಪಾ ಮಂಜುನಾಥ್‌ ಹಾಗೂ ಡಾ. ಮಂಜುನಾಥ್‌ ಪಾಳ್ಯ ಇವರ ಏಕೈಕ ಪುತ್ರಿಯಾಗಿರುವ ಕುಮಾರಿ ಸುನಿಧಿಯು ಬಹಳ ಸೌಮ್ಯ ಹಾಗೂ ಶಾಂತ ಸ್ವಭಾವದ ಹುಡುಗಿ. ತಂದೆ ಮತ್ತು ತಾಯಿಯರು ಉಪನ್ಯಾಸಕ ವೃತ್ತಿಯಲ್ಲಿರುವುದರಿಂದ ತಮ್ಮ ಅಜ್ಜ-ಜ್ಜಿಯ ಜೊತೆಗೆ ಹೆಚ್ಚು ಸಮಯ ಕಳೆಯುವುದರಿಂದ ಗುರುಹಿರಿಯರೊಂದಿಗೆ ವಿನಮ್ರ ಹಾಗೂ ಪ್ರೀತಿಯ ಸಂಬಂಧವನ್ನು ಹೊಂದಿದ್ದಾರೆ.

ಹಿರಿಯ ಸಾಹಿತಿಗಳಾದ ಡಾ. ನರಹಳ್ಳಿ ಬಾಲ ಸುಬ್ರಮಣ್ಯ, ಮಹಾಬಲ ಮೂರ್ತಿ ಕೂಡ್ಲೇಕೆರೆ, ಡಾ.ಪ್ರಮೀಳಾ ಮಾಧವ್, ಡಾ. ಸುರೇಶ ಪಾಟೀಲ, ಡಾ. ಆಶಾದೇವಿ ಎಂ ಎಸ್, ಡಾ. ಕೆ. ಪಿ ಭಟ್, ಡಾ. ಸುಮಿತ್ರ ಎಂ, ಡಾ. ಸಿ.ಬಿ. ಹೊನ್ನುಸಿದ್ಧಾರ್ಥ, ಡಾ. ರಘುರಾಂ ಮೊದಲಾದ ಸಾಹಿತಿಗಳು, ಸುನಿಧಿಯ ಪೋಷಕರ ಗುರುಗಳು, ಹೀಗೆ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಹಾಗೂ ಬೆಂಗಳೂರಿನ ಹಲವಾರು ಕಾಲೇಜುಗಳ ಉಪನ್ಯಾಸಕರ ದೊಡ್ಡ ಬಳಗ, ಸಂಬಂಧಿಕರು ಉಪಸ್ಥಿತರಿದ್ದು ಹರಸಿದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago