ಕಲ್ಯಾಣಸಿರಿ ವಿಶೇಷ

ಪ್ರಚಾರಕ್ಕಾಗಿ ಸಸಿ ನೆಡಬೇಡಿಮನುಕುಲಕ್ಕಾಗಿ ನೆಡಿ.ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕರಾದ ಖಾದರಸಾಬ್ ಹುಲ್ಲೂರು “ಅಕ್ಷರ-ಅನ್ನ, ಪರಿಸರ-ಚಿನ್ನ”

ಗಂಗಾವತಿ: ಇಂದು ಆನೆಗುಂದಿ ಮಹಿಳಾ ಶಕ್ತಿ ಕೇಂದ್ರದಲ್ಲಿ ಪರಿಸರ ಪ್ರೇಮಿ ಸಿಂಧೂ ಡಿ. ಜೊತೆ, ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕರಾದ ಖಾದರಸಾಬ ಹುಲ್ಲೂರು ರವರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ನಾನು ಹಳೆ ಬೇರು ಆದರೆ, ಸಿಂಧೂ ಡಿ ಹೊಸ ಚಿಗುರು, ಸಿಂಧೂವಿನ ಜೊತೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಸಂತೋಷವಾಗುತ್ತಿದೆ. ಪ್ರತಿಯೊಬ್ಬರೂ ಮನುಕುಲ ಪ್ರಾಣಿ ಸಂಕುಲದ ಉಳಿವಿಗಾಗಿ ಸಸಿ ನೆಡಬೇಕಾಗಿದೆ. ಇಂತಹ ಪರಿಸರ ಕಾಳಜಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿ ನೆಡಬೇಕು, ಪರಿಸರ ರಕ್ಷಿಸಬೇಕು. ಈಗಾಗಲೇ ಪರಿಸರದಲ್ಲಿ ತುಂಬಾ ಏರುಪೇರು ವಾತಾವರಣವಾಗಿದೆ. ಮಿತಿಮೀರಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಮಳೆಗಾಲದಲ್ಲಿ ಮಳೆಯಿಲ್ಲ, ಹಾಗಾಗಿ ಸಸಿ ನೆಡುವುದು ಪ್ರಕೃತಿ ಉಳಿಸುವುದು ಒಂದೇ ಮಾರ್ಗವಾಗಿದೆ. ಆದ್ದರಿಂದ ನಾನು ಈಗಿನಿಂದಲೇ ಚಿಕ್ಕ ಮಕ್ಕಳಿಗೆ ಸಸಿ ನೆಡುವುದು, ಅದನ್ನು ರಕ್ಷಣೆ ಮಾಡುವುದರ ಬಗ್ಗೆ ಪ್ರಕೃತಿ ಉಳಿಸುವುದರ ಬಗ್ಗೆ ಹೇಳುವ ಮೂಲಕ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದೇ ನನ್ನ ಮೂಲ ಉದ್ದೇಶವಾಗಿದೆ. ಈಗ ಸಿಂಧೂ ನನಗೆ ಸಿಕ್ಕಿರುವುದು ತುಂಬಾ ಹೆಮ್ಮೆಯಾಗಿದೆ. “ರಾಮಕೃಷ್ಣ ಪರಮಹಂಸ”ರಿಗೆ ಸ್ವಾಮಿ ವಿವೇಕಾನಂದ ಸಿಕ್ಕಂತೆ ನನಗೆ ಸಿಂಧೂ ಡಿ ಸಿಕ್ಕಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟೇಶ, ನರಸಿಂಹಲು ಹಾಗೂ ಗ್ರಾಮಸ್ಥರಾದ ಲಕ್ಷಿö್ಮÃ, ರುಕ್ಮಿಣಿ, ನಿಂಗಮ್ಮ, ದುರ್ಗಾ, ಜ್ಯೋತಿಕಾ, ಸರಸ್ವತಿ ಸೇರಿದಂತೆ ಇತರರು ಪ್ರೋತ್ಸಾಹ ನೀಡಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago