ಕಲ್ಯಾಣಸಿರಿ ವಿಶೇಷ

ಮೇ ೩೦ ಕ್ಕೆ ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಹಾಸನಛಲೋ:ಭಾರಧ್ವಜ್


ಗಂಗಾವತಿ: ಸಂಸದ ಪ್ರಜ್ವಲ್ ರೇವಣ್ಣ ಬಂಧನ ವಿಳಂಬ ಖಂಡಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ರಾಜ್ಯದಾದ್ಯಂತ ನೂರಾರು ಸಂಘಟನೆಗಳು ಒಟ್ಟಾಗಿ ಮೇ.೩೦ ರಂದು ಹಾಸನಕ್ಕೆ ತೆರಳುತ್ತಿದ್ದು ಗಂಗಾವತಿ ತಾಲೂಕಿನಿಂದ ೧೦೦ ಕ್ಕು ಹೆಚ್ಚು ಸಿಪಿಐಎಂಎಲ್ ಕಾರ್ಯಕರ್ತರು ಹೋರಾಟಕ್ಕೆ ಹೋಗುತ್ತಿದ್ದೇವೆ ಎಂದು ಸಿಪಿಐಎಂಎಲ್ ರಾಜ್ಯ ಸ್ಥಾಯಿ ಸಮಿತಿ ಸದಸ್ಯ ಜೆ. ಭಾರಧ್ವಜ್ ಹೇಳಿದರು. ಅವರು ಮಂಗಳವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.
ಮಾಜಿ ಪ್ರಧಾನಿ ದೇವೆ ಗೌಡರ ಕುಟುಂಬದ ಬಗೆಗೆ ನಮಗೆ ಅಪಾರ ಗೌರವವಿತ್ತು ಆದರೆ, ಮೊಮ್ಮಗನ ಈ ದುಷ್ಕೃತ್ಯ ಅವರ ಅಷ್ಟು ದಿನದ ರಾಜಕೀಯ ಜೀವನಕ್ಕೆ ಮಸಿ ಬಳೆದಿದೆ, ಸಿಡಿ ಪ್ರಕರಣದಲ್ಲಿ ಸಿಲುಕಿರುವ ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕು, ಸಿಡಿಯನ್ನು ಸಾರ್ವಜನಿಕವಾಗಿ ಹಂಚಿದವರಿಗೂ, ಈ ಕೃತ್ಯ ಸಾರ್ವಜನಿಕಗೊಳ್ಳಲು ಕಾರಣವಾದ ಡಿ.ಕೆ ಶಿವಕುಮಾರ್ ಅವರಿಗು, ಡ್ರೆöÊವರ್ ಕಾರ್ತಿಕ್ ಗೌಡ ಅವರಿಗು ಶಿಕ್ಷೆಯಾಗಬೇಕಿದ್ದು, ಎಸ್‌ಐಟಿ ಪ್ರಾಮಾಣಿಕ ತನಿಖೆ ಮಾಡುವ ಮೂಲಕ ತಪ್ಪತಸ್ಥರು ಜೈಲು ಸೇರಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ವಿಜಯ್ ಕುಮಾರ್ ಮಾತನಾಡಿ, ದಾವಣಗೆರೆ ಚನ್ನಗೆರೆಯಲ್ಲಿ ಜರುಗಿದ ಲಾಕಪ್ ಡೆತ್ ತನಿಖೆಗೊಳ್ಳಬೇಕು ಉದ್ರಿಕ್ತರು ಜೈಲಿಗೆ ಕಲ್ಲು ಹೊಡೆದು ದ್ವಂಸ ಮಾಡಿದ ಕ್ರಮ ಅಕ್ಷಮ್ಯ, ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಶಕ್ತಿಯನ್ನು ನಾವು ಖಂಡಿಸುತ್ತೇವೆ. ಮಹಿಳೆಯರ ಮಾನ ಹರಣಕ್ಕೆ ಕಾರಣವಾದ ಪ್ರಜ್ವಲ್ ಹಾಗು ಈ ವಿಷಯ ಸಾರ್ವಜನಿಕವಾಗಿ ಬಹಿರಂಗಗೊಳ್ಳಲು ಬೆನ್ನಿಗೆ ನಿಂತು ಹಣ ನೀಡಿದ ದುಷ್ಟರನ್ನು ಎಸ್‌ಐಟಿ ಕೂಡಲೆ ಬಂಧಿಸಬೇಕೆAದು ಅಗ್ರಹಿಸಿದರು.
ರಾಜ್ಯ ಸಮಿತಿ ಸದಸ್ಯ ಸಣ್ಣ ಹನುಮಂತಪ್ಪ ಹುಲಿ ಹೈದರ್ ಮಾತನಾಡಿ, ಸಾಹಸ್ರಾರು ಸಂಖ್ಯೆಯಲ್ಲಿ ಎಡ ಪಂಥಿಯ ವಿಚಾರವಾದಿಗಳು ಹಾಸನಕ್ಕೆ ತೆರಳುತ್ತಿದ್ದು, ಮಹರಾಜಾ ಪಾರ್ಕ್ನಿಂದ ಜಿಲ್ಲಾಧಿಕಾರಿ ಕಚೇರಿ ಬಳಿಯ ಬಸ್ ನಿಲ್ದಾಣದಲ್ಲಿ ಬೃಹತ್ ಬಹಿರಂಗ ಸಭೆ ಏರ್ಪಡಲಿದ್ದು ಪೆಂಡ್ರೆöÊವ್ ರೋವಾರಿಗಳ ವಿರುದ್ಧ ಕಹಳೆ ಮೊಳಗಿಸಲಿದ್ದೇವೆ ಎಂದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago