ಕೊಪ್ಪಳ:ನುಷ್ಯನಲ್ಲಿ ಮಾನಸಿಕ ಆತ್ಮಿಕ ಬಲ ಕಡಿಮೆ ಆಗಿರುವುದೇ ತಂಬಾಕಿಗೆ ಬಲಿಯಾಗಲು ಮುಖ್ಯ ಕಾರಣ ಎಂದು ಬ್ರಹ್ಮಕುಮಾರಿ ಯೋಗಿನಿ ಅಕ್ಕ ತಿಳಿಸಿದರು.
ಅವರು ಈಶ್ವರೀಯ ವಿಶ್ವವಿದ್ಯಾಲಯ ಏರ್ಪಡಿಸಿದ ತಂಬಾಕು ನಿಷೇಧ ದಿನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬುದ್ಧಿಜೀವಿಯಾದ ಮನುಷ್ಯನಿಗೆ ಒಳ್ಳೆಯದನ್ನು ಸ್ವೀಕಾರ ಮಾಡಲು ಆಗುತ್ತಿಲ್ಲ ಕೆಟ್ಟದ್ದನ್ನು ಬಿಡಲು ಆಗುತ್ತಿಲ್ಲ ಅನೇಕ ದುಶ್ಚಟಗಳಿಗೆ ದಾಸನಾಗುತ್ತಿದ್ದಾನೆ ದಿನೇ ದಿನೇ ಮನುಷ್ಯನಲ್ಲಿ ದುಃಖ ಅಶಾಂತಿ ಹೆಚ್ಚುತ್ತಿದೆ ಇಂತಹ ಸ್ಥಿತಿಗೆ ಮೂಲ ಕಾರಣ ಮನುಷ್ಯನ ಮನೋಬಲ ಕಡಿಮೆಯಾಗಿದೆ ತನ್ನ ಮೇಲೆ ತನಗೆ ನಿಯಂತ್ರಣ ಶಕ್ತಿ ಕಳೆದುಕೊಳ್ಳುತ್ತಿದ್ದಾನೆ ಆದ್ದರಿಂದ ವರ್ತಮಾನ ಸಮಯದಲ್ಲಿ ಇಂದಿನ ಮನುಕುಲವನ್ನು ದುಶ್ಚಟಗಳಿಂದ ದೂರ ಮಾಡಲು ವ್ಯಕ್ತಿ ದುಶ್ಚಟಗಳಿಗೆ ವಶವಾಗದಂತೆ ಮಾಡಲು ವ್ಯಕ್ತಿಯಲ್ಲಿ ದೃಢತೆಯ ಶಕ್ತಿ ಆತ್ಮವಿಶ್ವಾಸವನ್ನು ಮೂಡಿಸುವ ಉದ್ದೇಶದಿಂದಲೇ ಈಶ್ವರೀಯ ವಿಶ್ವ ವಿದ್ಯಾಲಯ ಇಂದು ವಿಶ್ವ ತಂಬಾಕು ನಿಷೇಧ ದಿನದ ಅಂಗವಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿದೆ ಎಂದರು. ಆಧುನಿಕ ಸಮಾಜದ ಒಂದು ಜ್ವಲಂತ ಸಮಸ್ಯೆ ಎಂದರೆ ತಂಬಾಕು ಸೇವನೆ, ಇದರಿಂದ ಲಕ್ಷಾಂತರ ಜನರ ರಚನಾತ್ಮಕ ಮತ್ತು ಕ್ರಿಯಾತ್ಮಕ ಶಕ್ತಿ ಹಾಳಾಗುತ್ತಿದೆ. ನೈತಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ವ್ಯಕ್ತಿ ಹಾಳಾಗುತ್ತಾನೆ. ಒಮ್ಮೆ ಈ ತಂಬಾಕು ಸೇವನೆಯ ಚಟ ಬಂತೆಂದರೆ ಅದು ವ್ಯಕ್ತಿಯನ್ನು ಬಿಡುವುದಿಲ್ಲ ಮನುಷ್ಯ ದುಷ್ಚಟಗಳಿಗೆ ಗುರಿಯಾಗಲು ಆತನ ದುರ್ಬಲ ವಿಚಾರಗಳೇ ಕಾರಣ. ವಿಚಾರ ಪರಿವರ್ತನೆಯಾಗದೆ ಆಚಾರ ಪರಿವರ್ತನೆ ಆಗಲು ಸಾಧ್ಯವಿಲ್ಲ. ಕೆಟ್ಟ ವಿಚಾರ ಕೆಟ್ಟ ಸಂಗ ಕೆಟ್ಟ ಚಟದಿಂದ ಮುಕ್ತ ಆಗಬೇಕಾದರೆ ಒಳ್ಳೆ ಸಂಗ ಒಳ್ಳೆ ವಿಚಾರ ಒಳ್ಳೆ ಸಂಸ್ಕಾರ ಜೀವನದಲ್ಲಿ ಬೇಕು. ಇಂದಿನ ಮನುಕುಲಕ್ಕೆ ಒಳ್ಳೆತನವನ್ನ ಜಾಗೃತಗೊಳಿಸಲು ಸಶಕ್ತ ಸಮಾಜವನ್ನು ನಿರ್ಮಾಣ ಮಾಡಲು ಮನೋಬಲ ವೃದ್ಧಿಗಾಗಿ ರಾಜಯೋಗ ಶಿಬಿರವನ್ನು ಈಶ್ವರೀಯ ವಿಶ್ವ ವಿದ್ಯಾಲಯ ಉಚಿತವಾಗಿ ಏರ್ಪಡಿಸಿದೆ ಬೆಳಿಗ್ಗೆ ಮತ್ತು ಸಂಜೆ 6.00 ಗಂಟೆಯಿಂದ 7.00ಗಂಟೆವರೆಗೆ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಜರುಗುವುದು ಎಂದು ಯೋಗಿನಿ ಅಕ್ಕ ಕರೆ ನೀಡಿದರು. ಸಾಮೂಹಿಕವಾಗಿ ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ಬ್ರಹ್ಮಕುಮಾರಿ ಸ್ನೇಹಕ್ಕ ಕಾರ್ಯಕ್ರಮ ನಿರೂಪಿಸಿದರು.
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…
ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron ಧಾರವಾಡ :…
ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…
Verdict in the murder case at the Taluwagera fair: 15 convicts sentenced to 7 years…
The ceremony of the 2025-26 class 10th students of Aaron Mirajkar School began with the…