ಕಲ್ಯಾಣಸಿರಿ ವಿಶೇಷ

ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ-ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!

ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ- ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!* ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಕೆಳಗಿನ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಜೂನ್ 4 ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯು ಜಿ ಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್ ಟಿ ಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷಷ ಪಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ.

ಈ ಮುಂಚೆ, ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ ಎಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ಇಂದು ನಿಜವಾಗಿದೆ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಮತ್ತು ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ.

ಈ ಹಿನ್ನೆಲೆಯಲ್ಲಿ, ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಐಡಿಎಸ್ಓ ಸರ್ಕಾರವನ್ನು ಆಗ್ರಹಿಸುತ್ತದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago