![](https://kalyanasiri.in/wp-content/uploads/2024/06/IMG-20240616-WA0248-226x300.jpg)
ಬೆಂಗಳೂರು: ಜೂನ್.16: ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.
![](https://kalyanasiri.in/wp-content/uploads/2024/06/IMG-20240616-WA0249-733x1024.jpg)
ಕೋಲಾರ ಜಿಲ್ಲೆ, ಮುಳಬಾಗಿಲು ತಾಲೂಕಿನ ಗುಜ್ಜನಹಳ್ಳಿ ಗ್ರಾಮದ ನಿವಾಸಿಯಾದ ದಿವಂಗತ ಗಡ್ಡೂರು ಮುನಿಯಪ್ಪ, ದಾಸನ್ನನವರ ವೆಂಕಟಮ್ಮ ಎಂಬ ದಂಪತಿಗಳ ಪುತ್ರ ವೆಂಕಟೇಶ್ ಜಿ.ಎಂ.ರವರು ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವ ವಿದ್ಯಾಲಯವು ಪದವಿಯನ್ನು ಪ್ರಧಾನ ಮಾಡುವ ಮೂಲಕ ಗೌರವಿಸಿದೆ. ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್.ಡಿ ಪದವಿ ಲಭಿಸಿರುವ ಹಿನ್ನಲೆ ಶಿಕ್ಷಕರು, ಸ್ನೇಹಿತ ಬಳಗ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.