ಕಲ್ಯಾಣಸಿರಿ ವಿಶೇಷ

ಇಕ್ಬಾಲ್ ಅನ್ಸಾರಿಯವರ ಜನ್ಮದಿನದ ಅಂಗವಾಗಿಬುದ್ಧಿಮಾಂದ್ಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ : ಮಂಜು ಹಂಚಿನಾಳ

Distribution of fruits to mentally retarded children on the occasion of Iqbal Ansari’s birthday: Manju Handinala

ಗAಗಾವತಿ: ಇಕ್ಬಾಲ್ ಅನ್ಸಾರಿಯವರ ಜನ್ಮದಿನದ ಅಂಗವಾಗಿ ಜೂನ್-೧೭ ರಂದು ನಗರದ ಬುದ್ಧಿಮಾಂದ್ಯ ಮಕ್ಕಳಿಗೆ ಇಕ್ಬಾಲ್ ಅನ್ಸಾರಿ ಅಭಿಮಾನಿಗಳು ಹಣ್ಣು ಹಂಪಲು ಹಾಗೂ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು.
ನಂತರ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಂಜು ಹಂಚಿನಾಳ ಮಾತನಾಡಿ. ಈ ಕ್ಷೇತ್ರದ ಜನ ಮೆಚ್ಚಿದ ನಾಯಕ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಸರ್ವ ಜನಾಂಗದವರೊAದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕ, ಅವರು ಎಲ್ಲಾ ಶ್ರಮಿಕರ ಮತ್ತು ದೀನದಲಿತರ ಉದ್ಧಾರಕ್ಕಾಗಿ ಶ್ರಮಿಸಿದವರು. ಇದರಿಂದಾಗಿ ಅವರಿಗೆ ರಾಜಕೀಯವಾಗಿ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಗುರುತಿಸಿಕೊಳ್ಳಲು ಅನುವಾಗುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ನಗರಸಭೆ ಮಾಜಿ ಸದಸ್ಯರು ಹಾಗೂ ವಕೀಲರು ಹುಸೇನಪ್ಪ ಹಂಚಿನಾಳ ಮಾತನಾಡಿ ಇಕ್ಬಾಲ್ ಅನ್ಸಾರಿ ಅವರ ಜನ್ಮದಿನದ ಶುಭಾಶಯಗಳು, ಜೊತೆಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗಂಗಾವತಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಮಾಡಲು ಅವರಿಗೆ ದೇವರ ಶಕ್ತಿ ನೀಡಲಿ ಎಂದು ಬೇಡಿದರು. ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರು ಒಂದೆ ಜಾತಿಗೆ, ಧರ್ಮಕ್ಕೆ ಸೀಮಿತರಲ್ಲ ಎಲ್ಲಾ ಜನಾಂಗಕ್ಕೆ ಸೇರಿದ ನಾಯಕರು ಎಂದರು. ಇವತ್ತು ಗಂಗಾವತಿ ಕ್ಷೇತ್ರ ಅಭಿವೃದ್ಧಿಯಾಗಿದೆ ಎಂದರೆ ಇದಕ್ಕೆ ಇಕ್ಬಾಲ್ ಅನ್ಸಾರಿ ಅವರೇ ಕಾರಣ. ಇಕ್ಬಾಲ್ ಅನ್ಸಾರಿಯವರು ಗಂಗಾವತಿ ಕ್ಷೇತ್ರವನ್ನು ಹೈಟೆಕ್ ನಗರವನ್ನಾಗಿ ಮಾಡಬೇಕೆಂಬುದು ಅವರ ದೊಡ್ಡ ಆಸೆಯಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಯುವ ಮುಖಂಡ ಶಿವರಾಜ್ ಚಲುವಾದಿ ಮಾತನಾಡಿ, ಮಾಜಿ ಸಚಿವ ಹಾಗೂ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಸರ್ವಜನಾಂಗದ ನಾಯಕ ಇಕ್ಬಾಲ್ ಅನ್ಸಾರಿಯವರಿಗೆ ಜನ್ಮದಿನದ ಶುಭಾಶಯಗಳು ಮತ್ತು ಮುಸ್ಲಿಂ ಸಮುದಾಯದ ಪವಿತ್ರ ಹಬ್ಬ ತ್ಯಾಗ ಬಲಿದಾನದ ಸಂಕೇತ ಹಬ್ಬವಾದ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
.ಈ ಸಂದರ್ಭದಲ್ಲಿ ಪ್ರಜ್ವಲ್, ಹನುಮಂತ, ಗೋಪಿ, ಮಲ್ಲಿಕಾರ್ಜುನ ಹಂಚಿನಾಳ, ಶಬ್ಬೀರ, ಹುಲ್ಲೇಶ ಮುಂಡಾಸ್ತು, ಮಾರತಿ ತಡಕಲಾ, ಬಸವರಾಜ, ಹನುಮಂತ ಗುಗ್ರಿ, ದುರಗೇಶ ಗುಗ್ರಿ ಇತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago